24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

ಬೆಳ್ತಂಗಡಿ: ಧಮ೯ಸ್ಥಳ ಗ್ರಾಮದ ಪಾಂಗಾಳ ಕು. ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಆ.21ರಂದುಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.

ಸೌಜನ್ಯ ಮೃತದೇಹ ದೊರೆತ ಸ್ಥಳಕ್ಕೆ ಹೋಗಿ , ಪೊಲೀಸರಿಂದ ಮಾಹಿತಿಗಳನ್ನು ಪಡೆದುಕೊಂಡರು. ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮಾವ ವಿಠಲ ಗೌಡ ಅವರಿಂದ ಮಾಹಿತಿಗಳನ್ನು ಪಡೆದು ಕೊಂಡರು. ಈ ಪ್ರಕರಣದಲ್ಲಿ ಆಯೋಗ ಯಾವ ರೀತಿಯಾಗಿ ಕೆಲಸ ಮಾಡಬಹುದು ಎಂಬ ವಿಚಾರವನ್ನು ಪರಿಶೀಲಿಸುತ್ತೇವೆ, ಕಾನೂನು ಪ್ರಕಾರವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಯೋಗ ಸಿದ್ದವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

‌ಸೌಜನ್ಯಳ ಸಹೋದರರ ಶಿಕ್ಷಣ ಮುಗಿದಿದ್ದು ಮನೆಯಲ್ಲಿ ಯಾರಿಗಾದರೂ ಸರಕಾರಿ ಉದ್ಯೋಗ ನೀಡಲು ಸಾದ್ಯವಿದೆಯೇ ಎಂಬುದನ್ನು ಪರಿಶೀಲಿಸುವುದಾಗಿಯೂ ಅವರು ತಿಳಿಸಿದರು.

ಈ ಪರಿಸರಕ್ಕೆ ಬಸ್ಸಿನ ವ್ಯವಸ್ಥೆ ಮಾಡಬೇಕು ಹಾಗೂ ಇಲ್ಲೊಂದು ಅಂಗನವಾಡಿ ಕೇಂದ್ರವಿರಬೇಕು ಎಂಬ ಬಗೆಗೆ ಬಹುದಿನಗಳಿಂದ ಬೇಡಿಕೆಯಿರುವುದಾಗಿ ಸೌಜನ್ಯಳ ಮನೆಯವರು ತಿಳಿಸಿದಾಗ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಿಡಿಪಿಒ ಪ್ರಿಯಾ ಆಗ್ನೆಸ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!