September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

ಬೆಳ್ತಂಗಡಿ: ಧಮ೯ಸ್ಥಳ ಗ್ರಾಮದ ಪಾಂಗಾಳ ಕು. ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಆ.21ರಂದುಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.

ಸೌಜನ್ಯ ಮೃತದೇಹ ದೊರೆತ ಸ್ಥಳಕ್ಕೆ ಹೋಗಿ , ಪೊಲೀಸರಿಂದ ಮಾಹಿತಿಗಳನ್ನು ಪಡೆದುಕೊಂಡರು. ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮಾವ ವಿಠಲ ಗೌಡ ಅವರಿಂದ ಮಾಹಿತಿಗಳನ್ನು ಪಡೆದು ಕೊಂಡರು. ಈ ಪ್ರಕರಣದಲ್ಲಿ ಆಯೋಗ ಯಾವ ರೀತಿಯಾಗಿ ಕೆಲಸ ಮಾಡಬಹುದು ಎಂಬ ವಿಚಾರವನ್ನು ಪರಿಶೀಲಿಸುತ್ತೇವೆ, ಕಾನೂನು ಪ್ರಕಾರವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಯೋಗ ಸಿದ್ದವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

‌ಸೌಜನ್ಯಳ ಸಹೋದರರ ಶಿಕ್ಷಣ ಮುಗಿದಿದ್ದು ಮನೆಯಲ್ಲಿ ಯಾರಿಗಾದರೂ ಸರಕಾರಿ ಉದ್ಯೋಗ ನೀಡಲು ಸಾದ್ಯವಿದೆಯೇ ಎಂಬುದನ್ನು ಪರಿಶೀಲಿಸುವುದಾಗಿಯೂ ಅವರು ತಿಳಿಸಿದರು.

ಈ ಪರಿಸರಕ್ಕೆ ಬಸ್ಸಿನ ವ್ಯವಸ್ಥೆ ಮಾಡಬೇಕು ಹಾಗೂ ಇಲ್ಲೊಂದು ಅಂಗನವಾಡಿ ಕೇಂದ್ರವಿರಬೇಕು ಎಂಬ ಬಗೆಗೆ ಬಹುದಿನಗಳಿಂದ ಬೇಡಿಕೆಯಿರುವುದಾಗಿ ಸೌಜನ್ಯಳ ಮನೆಯವರು ತಿಳಿಸಿದಾಗ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಿಡಿಪಿಒ ಪ್ರಿಯಾ ಆಗ್ನೆಸ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Suddi Udaya

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ

Suddi Udaya

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಎನ್.ಎಸ್.ಗೋಖಲೆ ಸಂಸ್ಮರಣಾ ವಿದ್ಯಾನಿಧಿ ವಿತರಣೆ

Suddi Udaya

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

Suddi Udaya
error: Content is protected !!