July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

ಬೆಳ್ತಂಗಡಿ: ಧಮ೯ಸ್ಥಳ ಗ್ರಾಮದ ಪಾಂಗಾಳ ಕು. ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಆ.21ರಂದುಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.

ಸೌಜನ್ಯ ಮೃತದೇಹ ದೊರೆತ ಸ್ಥಳಕ್ಕೆ ಹೋಗಿ , ಪೊಲೀಸರಿಂದ ಮಾಹಿತಿಗಳನ್ನು ಪಡೆದುಕೊಂಡರು. ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮಾವ ವಿಠಲ ಗೌಡ ಅವರಿಂದ ಮಾಹಿತಿಗಳನ್ನು ಪಡೆದು ಕೊಂಡರು. ಈ ಪ್ರಕರಣದಲ್ಲಿ ಆಯೋಗ ಯಾವ ರೀತಿಯಾಗಿ ಕೆಲಸ ಮಾಡಬಹುದು ಎಂಬ ವಿಚಾರವನ್ನು ಪರಿಶೀಲಿಸುತ್ತೇವೆ, ಕಾನೂನು ಪ್ರಕಾರವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಯೋಗ ಸಿದ್ದವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

‌ಸೌಜನ್ಯಳ ಸಹೋದರರ ಶಿಕ್ಷಣ ಮುಗಿದಿದ್ದು ಮನೆಯಲ್ಲಿ ಯಾರಿಗಾದರೂ ಸರಕಾರಿ ಉದ್ಯೋಗ ನೀಡಲು ಸಾದ್ಯವಿದೆಯೇ ಎಂಬುದನ್ನು ಪರಿಶೀಲಿಸುವುದಾಗಿಯೂ ಅವರು ತಿಳಿಸಿದರು.

ಈ ಪರಿಸರಕ್ಕೆ ಬಸ್ಸಿನ ವ್ಯವಸ್ಥೆ ಮಾಡಬೇಕು ಹಾಗೂ ಇಲ್ಲೊಂದು ಅಂಗನವಾಡಿ ಕೇಂದ್ರವಿರಬೇಕು ಎಂಬ ಬಗೆಗೆ ಬಹುದಿನಗಳಿಂದ ಬೇಡಿಕೆಯಿರುವುದಾಗಿ ಸೌಜನ್ಯಳ ಮನೆಯವರು ತಿಳಿಸಿದಾಗ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಿಡಿಪಿಒ ಪ್ರಿಯಾ ಆಗ್ನೆಸ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya
error: Content is protected !!