April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

ಅರಸಿನಮಕ್ಕಿ : ಸುದೆಗಂಡಿ ಕಿರುಸೇತುವೆಯ ತಡೆಬೇಲಿಯ ಕಾಮಗಾರಿ ಮುಗಿದು ಜಮೆ – ಖರ್ಚುಗಳ ಸಭೆ ಆ.18 ರಂದು ದರ್ಭೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಳದ ಸಭಾಭವನದಲ್ಲಿ ನಡೆಯಿತು.

ಸಮಿತಿಯ ಅಧ್ಯಕ್ಷರಾದ ಕರುಣಾಕರ ಗೋಗಟೆಯವರು ಮಾತನಾಡಿ ಕಾಮಗಾರಿಗಳಿಗಾಗಿ ಧನಸಂಗ್ರಹ ಮತ್ತು ಧನಸಹಾಯ ಮಾಡಿದ ಮಹನೀಯರಿಗೆ ಮತ್ತು ಕ್ಲಪ್ತ ಸಮಯದಲ್ಲಿ ಕೆಲಸ ನಿರ್ವಹಿಸಿದ ಮಾಸ್ಟರ್ ಪ್ಲಾನರಿ, ಪುತ್ತೂರು ಇವರಿಗೆ ಕೃತಜ್ಞತಾ ಪೂರ್ವಕವಾಗಿ ಅಭಿನಂದಿಸಿದರು. ಕಾರ್ಯದರ್ಶಿ ಪ್ರಶಾಂತ್ ಹೆಬ್ಬಾರು ಜಮೆ ಖರ್ಚುಗಳನ್ನು ಸಭೆಗೆ ತಿಳಿಸಿದರು. ಒಟ್ಟು ಜಮೆ ರೂ. 2,64,562, ಖರ್ಚು ರೂ.1,71,100, ಉಳಿಕೆ ರೂ. 93,462 ಮೊತ್ತವು ಸಮಿತಿಯಲ್ಲಿದೆ.

ಸಭೆಯಲ್ಲಿ ಉಳಿಕೆ ಮೊತ್ತದ ಬಗ್ಗೆ ಚರ್ಚೆಯಾಗಿ ಪುನಃ ಸೇತುವೆಯ ಉಳಿದ ಭಾಗಕ್ಕೆ ಶಾಶ್ವತ ತಡೆಬೇಲಿಯನ್ನು ನಿರ್ಮಾಣ ಮಾಡುವುದೆಂದು ನಿರ್ಣಯಿಸಲಾಯಿತು. ಆದರೆ ಉಳಿಕೆ ಮೊತ್ತ ಸಾಲದೇ ಇರುವುದರಿಂದ ಇನ್ನು ಸುಮಾರು ರೂ.90ಸಾವಿರ ವನ್ನು ದಾನಿಗಳಿಂದ ಸಂಗ್ರಹಿಸುವುದೆಂದು, ಮುಂದೆ ಸೆಪ್ಟೆಂಬರ್ ತಿಂಗಳಿನಲ್ಲಿ 2ನೇ ಹಂತದ ಕಾಮಗಾರಿಯನ್ನು ಮಾಡುವುದೆಂದು ನಿರ್ಣಯಿಸಲಾಯಿತು.

ಇದರೊಂದಿಗೆ ಸೇತುವೆಯ ದೃಢವಾಗಿ ಸರ್ವಋತುಗಳಲ್ಲೂ ಸುಗಮ ಸಂಚಾರ ಯೋಗ್ಯವಾಗಲಿದೆ. ಇದಕ್ಕೆ ಜನರ ಸಹಕಾರ ಅತ್ಯಗತ್ಯವಾಗಿದೆ ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ.

ಸಭೆಯಲ್ಲಿ ಕರುಣಾಕರ ಗೋಗಟೆ ಹೊಸ್ಮಠ, ಶ್ರೀಮತಿ ವಸುಧಾ ಗೋಗಟೆ, ಪಾಳಂದೆ ನರಸಿಂಹ ಭಟ್, ಪ್ರಶಾಂತ್ ಹೆಬ್ಬಾರ್ ನೆಲ್ಲಿತಡ್ಕ, ನವೀನ್ ಶೆಂಡ್ಯೆ ಅರೆಕಲ್, ದಿವಾಕರ ತಾಮ್ಮನ್ ಕರ್, ಉದಯ ಕುಮಾರ್ ಅಭ್ಯಂಕರ್, ಜಗದೀಶ , ರಾಜೇಶ್ ಬೊಳ್ಳೋಡಿ, ಸಮಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya
error: Content is protected !!