23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

ಅರಸಿನಮಕ್ಕಿ : ಸುದೆಗಂಡಿ ಕಿರುಸೇತುವೆಯ ತಡೆಬೇಲಿಯ ಕಾಮಗಾರಿ ಮುಗಿದು ಜಮೆ – ಖರ್ಚುಗಳ ಸಭೆ ಆ.18 ರಂದು ದರ್ಭೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಳದ ಸಭಾಭವನದಲ್ಲಿ ನಡೆಯಿತು.

ಸಮಿತಿಯ ಅಧ್ಯಕ್ಷರಾದ ಕರುಣಾಕರ ಗೋಗಟೆಯವರು ಮಾತನಾಡಿ ಕಾಮಗಾರಿಗಳಿಗಾಗಿ ಧನಸಂಗ್ರಹ ಮತ್ತು ಧನಸಹಾಯ ಮಾಡಿದ ಮಹನೀಯರಿಗೆ ಮತ್ತು ಕ್ಲಪ್ತ ಸಮಯದಲ್ಲಿ ಕೆಲಸ ನಿರ್ವಹಿಸಿದ ಮಾಸ್ಟರ್ ಪ್ಲಾನರಿ, ಪುತ್ತೂರು ಇವರಿಗೆ ಕೃತಜ್ಞತಾ ಪೂರ್ವಕವಾಗಿ ಅಭಿನಂದಿಸಿದರು. ಕಾರ್ಯದರ್ಶಿ ಪ್ರಶಾಂತ್ ಹೆಬ್ಬಾರು ಜಮೆ ಖರ್ಚುಗಳನ್ನು ಸಭೆಗೆ ತಿಳಿಸಿದರು. ಒಟ್ಟು ಜಮೆ ರೂ. 2,64,562, ಖರ್ಚು ರೂ.1,71,100, ಉಳಿಕೆ ರೂ. 93,462 ಮೊತ್ತವು ಸಮಿತಿಯಲ್ಲಿದೆ.

ಸಭೆಯಲ್ಲಿ ಉಳಿಕೆ ಮೊತ್ತದ ಬಗ್ಗೆ ಚರ್ಚೆಯಾಗಿ ಪುನಃ ಸೇತುವೆಯ ಉಳಿದ ಭಾಗಕ್ಕೆ ಶಾಶ್ವತ ತಡೆಬೇಲಿಯನ್ನು ನಿರ್ಮಾಣ ಮಾಡುವುದೆಂದು ನಿರ್ಣಯಿಸಲಾಯಿತು. ಆದರೆ ಉಳಿಕೆ ಮೊತ್ತ ಸಾಲದೇ ಇರುವುದರಿಂದ ಇನ್ನು ಸುಮಾರು ರೂ.90ಸಾವಿರ ವನ್ನು ದಾನಿಗಳಿಂದ ಸಂಗ್ರಹಿಸುವುದೆಂದು, ಮುಂದೆ ಸೆಪ್ಟೆಂಬರ್ ತಿಂಗಳಿನಲ್ಲಿ 2ನೇ ಹಂತದ ಕಾಮಗಾರಿಯನ್ನು ಮಾಡುವುದೆಂದು ನಿರ್ಣಯಿಸಲಾಯಿತು.

ಇದರೊಂದಿಗೆ ಸೇತುವೆಯ ದೃಢವಾಗಿ ಸರ್ವಋತುಗಳಲ್ಲೂ ಸುಗಮ ಸಂಚಾರ ಯೋಗ್ಯವಾಗಲಿದೆ. ಇದಕ್ಕೆ ಜನರ ಸಹಕಾರ ಅತ್ಯಗತ್ಯವಾಗಿದೆ ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ.

ಸಭೆಯಲ್ಲಿ ಕರುಣಾಕರ ಗೋಗಟೆ ಹೊಸ್ಮಠ, ಶ್ರೀಮತಿ ವಸುಧಾ ಗೋಗಟೆ, ಪಾಳಂದೆ ನರಸಿಂಹ ಭಟ್, ಪ್ರಶಾಂತ್ ಹೆಬ್ಬಾರ್ ನೆಲ್ಲಿತಡ್ಕ, ನವೀನ್ ಶೆಂಡ್ಯೆ ಅರೆಕಲ್, ದಿವಾಕರ ತಾಮ್ಮನ್ ಕರ್, ಉದಯ ಕುಮಾರ್ ಅಭ್ಯಂಕರ್, ಜಗದೀಶ , ರಾಜೇಶ್ ಬೊಳ್ಳೋಡಿ, ಸಮಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಧರ್ಮಸ್ಥಳ: ಎಸ್.ಐ.ಟಿ ಅಧಿಕಾರಿಗಳಿಗೆ ಮೃತದೇಹಗಳನ್ನು ಹೂತು ಹಾಕಿದ 13 ಸ್ಥಳಗಳನ್ನು ತೋರಿಸಿದ ದೂರುದಾರ ಗುರುತಿಸಿದ ಸ್ಥಳಗಳಿಗೆ ಶಸ್ತ್ರ ಸಜ್ಜಿತ ಎ.ಎನ್.ಎಫ್ ಸಿಬ್ಬಂದಿಗಳಿಂದ ಬಿಗಿ ಭದ್ರತೆ ನಾಳೆ ಮತ್ತೆ ಸ್ಥಳ ಮಹಜರು ಕಾರ್ಯ ಮುಂದುವರಿಕೆ

Suddi Udaya

ಧರ್ಮಸಂರಕ್ಷಣಾ ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಪಕ್ಕದಲ್ಲೇ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಅಳವಡಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya
error: Content is protected !!