32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

ಅರಸಿನಮಕ್ಕಿ : ಸುದೆಗಂಡಿ ಕಿರುಸೇತುವೆಯ ತಡೆಬೇಲಿಯ ಕಾಮಗಾರಿ ಮುಗಿದು ಜಮೆ – ಖರ್ಚುಗಳ ಸಭೆ ಆ.18 ರಂದು ದರ್ಭೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಳದ ಸಭಾಭವನದಲ್ಲಿ ನಡೆಯಿತು.

ಸಮಿತಿಯ ಅಧ್ಯಕ್ಷರಾದ ಕರುಣಾಕರ ಗೋಗಟೆಯವರು ಮಾತನಾಡಿ ಕಾಮಗಾರಿಗಳಿಗಾಗಿ ಧನಸಂಗ್ರಹ ಮತ್ತು ಧನಸಹಾಯ ಮಾಡಿದ ಮಹನೀಯರಿಗೆ ಮತ್ತು ಕ್ಲಪ್ತ ಸಮಯದಲ್ಲಿ ಕೆಲಸ ನಿರ್ವಹಿಸಿದ ಮಾಸ್ಟರ್ ಪ್ಲಾನರಿ, ಪುತ್ತೂರು ಇವರಿಗೆ ಕೃತಜ್ಞತಾ ಪೂರ್ವಕವಾಗಿ ಅಭಿನಂದಿಸಿದರು. ಕಾರ್ಯದರ್ಶಿ ಪ್ರಶಾಂತ್ ಹೆಬ್ಬಾರು ಜಮೆ ಖರ್ಚುಗಳನ್ನು ಸಭೆಗೆ ತಿಳಿಸಿದರು. ಒಟ್ಟು ಜಮೆ ರೂ. 2,64,562, ಖರ್ಚು ರೂ.1,71,100, ಉಳಿಕೆ ರೂ. 93,462 ಮೊತ್ತವು ಸಮಿತಿಯಲ್ಲಿದೆ.

ಸಭೆಯಲ್ಲಿ ಉಳಿಕೆ ಮೊತ್ತದ ಬಗ್ಗೆ ಚರ್ಚೆಯಾಗಿ ಪುನಃ ಸೇತುವೆಯ ಉಳಿದ ಭಾಗಕ್ಕೆ ಶಾಶ್ವತ ತಡೆಬೇಲಿಯನ್ನು ನಿರ್ಮಾಣ ಮಾಡುವುದೆಂದು ನಿರ್ಣಯಿಸಲಾಯಿತು. ಆದರೆ ಉಳಿಕೆ ಮೊತ್ತ ಸಾಲದೇ ಇರುವುದರಿಂದ ಇನ್ನು ಸುಮಾರು ರೂ.90ಸಾವಿರ ವನ್ನು ದಾನಿಗಳಿಂದ ಸಂಗ್ರಹಿಸುವುದೆಂದು, ಮುಂದೆ ಸೆಪ್ಟೆಂಬರ್ ತಿಂಗಳಿನಲ್ಲಿ 2ನೇ ಹಂತದ ಕಾಮಗಾರಿಯನ್ನು ಮಾಡುವುದೆಂದು ನಿರ್ಣಯಿಸಲಾಯಿತು.

ಇದರೊಂದಿಗೆ ಸೇತುವೆಯ ದೃಢವಾಗಿ ಸರ್ವಋತುಗಳಲ್ಲೂ ಸುಗಮ ಸಂಚಾರ ಯೋಗ್ಯವಾಗಲಿದೆ. ಇದಕ್ಕೆ ಜನರ ಸಹಕಾರ ಅತ್ಯಗತ್ಯವಾಗಿದೆ ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ.

ಸಭೆಯಲ್ಲಿ ಕರುಣಾಕರ ಗೋಗಟೆ ಹೊಸ್ಮಠ, ಶ್ರೀಮತಿ ವಸುಧಾ ಗೋಗಟೆ, ಪಾಳಂದೆ ನರಸಿಂಹ ಭಟ್, ಪ್ರಶಾಂತ್ ಹೆಬ್ಬಾರ್ ನೆಲ್ಲಿತಡ್ಕ, ನವೀನ್ ಶೆಂಡ್ಯೆ ಅರೆಕಲ್, ದಿವಾಕರ ತಾಮ್ಮನ್ ಕರ್, ಉದಯ ಕುಮಾರ್ ಅಭ್ಯಂಕರ್, ಜಗದೀಶ , ರಾಜೇಶ್ ಬೊಳ್ಳೋಡಿ, ಸಮಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜು.21 ರಂದು ಕೆ.ಎಸ್.ಎಂ.ಸಿ.ಎ ವತಿಯಿಂದ ಬೆಳ್ತಂಗಡಿಯಲ್ಲಿ ಮೆರವಣಿಗೆ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya
error: Content is protected !!