ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

ಅರಸಿನಮಕ್ಕಿ : ಸುದೆಗಂಡಿ ಕಿರುಸೇತುವೆಯ ತಡೆಬೇಲಿಯ ಕಾಮಗಾರಿ ಮುಗಿದು ಜಮೆ – ಖರ್ಚುಗಳ ಸಭೆ ಆ.18 ರಂದು ದರ್ಭೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಳದ ಸಭಾಭವನದಲ್ಲಿ ನಡೆಯಿತು.

ಸಮಿತಿಯ ಅಧ್ಯಕ್ಷರಾದ ಕರುಣಾಕರ ಗೋಗಟೆಯವರು ಮಾತನಾಡಿ ಕಾಮಗಾರಿಗಳಿಗಾಗಿ ಧನಸಂಗ್ರಹ ಮತ್ತು ಧನಸಹಾಯ ಮಾಡಿದ ಮಹನೀಯರಿಗೆ ಮತ್ತು ಕ್ಲಪ್ತ ಸಮಯದಲ್ಲಿ ಕೆಲಸ ನಿರ್ವಹಿಸಿದ ಮಾಸ್ಟರ್ ಪ್ಲಾನರಿ, ಪುತ್ತೂರು ಇವರಿಗೆ ಕೃತಜ್ಞತಾ ಪೂರ್ವಕವಾಗಿ ಅಭಿನಂದಿಸಿದರು. ಕಾರ್ಯದರ್ಶಿ ಪ್ರಶಾಂತ್ ಹೆಬ್ಬಾರು ಜಮೆ ಖರ್ಚುಗಳನ್ನು ಸಭೆಗೆ ತಿಳಿಸಿದರು. ಒಟ್ಟು ಜಮೆ ರೂ. 2,64,562, ಖರ್ಚು ರೂ.1,71,100, ಉಳಿಕೆ ರೂ. 93,462 ಮೊತ್ತವು ಸಮಿತಿಯಲ್ಲಿದೆ.

ಸಭೆಯಲ್ಲಿ ಉಳಿಕೆ ಮೊತ್ತದ ಬಗ್ಗೆ ಚರ್ಚೆಯಾಗಿ ಪುನಃ ಸೇತುವೆಯ ಉಳಿದ ಭಾಗಕ್ಕೆ ಶಾಶ್ವತ ತಡೆಬೇಲಿಯನ್ನು ನಿರ್ಮಾಣ ಮಾಡುವುದೆಂದು ನಿರ್ಣಯಿಸಲಾಯಿತು. ಆದರೆ ಉಳಿಕೆ ಮೊತ್ತ ಸಾಲದೇ ಇರುವುದರಿಂದ ಇನ್ನು ಸುಮಾರು ರೂ.90ಸಾವಿರ ವನ್ನು ದಾನಿಗಳಿಂದ ಸಂಗ್ರಹಿಸುವುದೆಂದು, ಮುಂದೆ ಸೆಪ್ಟೆಂಬರ್ ತಿಂಗಳಿನಲ್ಲಿ 2ನೇ ಹಂತದ ಕಾಮಗಾರಿಯನ್ನು ಮಾಡುವುದೆಂದು ನಿರ್ಣಯಿಸಲಾಯಿತು.

ಇದರೊಂದಿಗೆ ಸೇತುವೆಯ ದೃಢವಾಗಿ ಸರ್ವಋತುಗಳಲ್ಲೂ ಸುಗಮ ಸಂಚಾರ ಯೋಗ್ಯವಾಗಲಿದೆ. ಇದಕ್ಕೆ ಜನರ ಸಹಕಾರ ಅತ್ಯಗತ್ಯವಾಗಿದೆ ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ.

ಸಭೆಯಲ್ಲಿ ಕರುಣಾಕರ ಗೋಗಟೆ ಹೊಸ್ಮಠ, ಶ್ರೀಮತಿ ವಸುಧಾ ಗೋಗಟೆ, ಪಾಳಂದೆ ನರಸಿಂಹ ಭಟ್, ಪ್ರಶಾಂತ್ ಹೆಬ್ಬಾರ್ ನೆಲ್ಲಿತಡ್ಕ, ನವೀನ್ ಶೆಂಡ್ಯೆ ಅರೆಕಲ್, ದಿವಾಕರ ತಾಮ್ಮನ್ ಕರ್, ಉದಯ ಕುಮಾರ್ ಅಭ್ಯಂಕರ್, ಜಗದೀಶ , ರಾಜೇಶ್ ಬೊಳ್ಳೋಡಿ, ಸಮಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಹಳೆಪೇಟೆ ಮುಹಿದ್ದೀನ್ ಜುಮಾ ಮಸ್ಟಿದ್ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ.96.07 ಫಲಿತಾಂಶ

Suddi Udaya
error: Content is protected !!