25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

ಅರಸಿನಮಕ್ಕಿ : ಸುದೆಗಂಡಿ ಕಿರುಸೇತುವೆಯ ತಡೆಬೇಲಿಯ ಕಾಮಗಾರಿ ಮುಗಿದು ಜಮೆ – ಖರ್ಚುಗಳ ಸಭೆ ಆ.18 ರಂದು ದರ್ಭೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಳದ ಸಭಾಭವನದಲ್ಲಿ ನಡೆಯಿತು.

ಸಮಿತಿಯ ಅಧ್ಯಕ್ಷರಾದ ಕರುಣಾಕರ ಗೋಗಟೆಯವರು ಮಾತನಾಡಿ ಕಾಮಗಾರಿಗಳಿಗಾಗಿ ಧನಸಂಗ್ರಹ ಮತ್ತು ಧನಸಹಾಯ ಮಾಡಿದ ಮಹನೀಯರಿಗೆ ಮತ್ತು ಕ್ಲಪ್ತ ಸಮಯದಲ್ಲಿ ಕೆಲಸ ನಿರ್ವಹಿಸಿದ ಮಾಸ್ಟರ್ ಪ್ಲಾನರಿ, ಪುತ್ತೂರು ಇವರಿಗೆ ಕೃತಜ್ಞತಾ ಪೂರ್ವಕವಾಗಿ ಅಭಿನಂದಿಸಿದರು. ಕಾರ್ಯದರ್ಶಿ ಪ್ರಶಾಂತ್ ಹೆಬ್ಬಾರು ಜಮೆ ಖರ್ಚುಗಳನ್ನು ಸಭೆಗೆ ತಿಳಿಸಿದರು. ಒಟ್ಟು ಜಮೆ ರೂ. 2,64,562, ಖರ್ಚು ರೂ.1,71,100, ಉಳಿಕೆ ರೂ. 93,462 ಮೊತ್ತವು ಸಮಿತಿಯಲ್ಲಿದೆ.

ಸಭೆಯಲ್ಲಿ ಉಳಿಕೆ ಮೊತ್ತದ ಬಗ್ಗೆ ಚರ್ಚೆಯಾಗಿ ಪುನಃ ಸೇತುವೆಯ ಉಳಿದ ಭಾಗಕ್ಕೆ ಶಾಶ್ವತ ತಡೆಬೇಲಿಯನ್ನು ನಿರ್ಮಾಣ ಮಾಡುವುದೆಂದು ನಿರ್ಣಯಿಸಲಾಯಿತು. ಆದರೆ ಉಳಿಕೆ ಮೊತ್ತ ಸಾಲದೇ ಇರುವುದರಿಂದ ಇನ್ನು ಸುಮಾರು ರೂ.90ಸಾವಿರ ವನ್ನು ದಾನಿಗಳಿಂದ ಸಂಗ್ರಹಿಸುವುದೆಂದು, ಮುಂದೆ ಸೆಪ್ಟೆಂಬರ್ ತಿಂಗಳಿನಲ್ಲಿ 2ನೇ ಹಂತದ ಕಾಮಗಾರಿಯನ್ನು ಮಾಡುವುದೆಂದು ನಿರ್ಣಯಿಸಲಾಯಿತು.

ಇದರೊಂದಿಗೆ ಸೇತುವೆಯ ದೃಢವಾಗಿ ಸರ್ವಋತುಗಳಲ್ಲೂ ಸುಗಮ ಸಂಚಾರ ಯೋಗ್ಯವಾಗಲಿದೆ. ಇದಕ್ಕೆ ಜನರ ಸಹಕಾರ ಅತ್ಯಗತ್ಯವಾಗಿದೆ ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ.

ಸಭೆಯಲ್ಲಿ ಕರುಣಾಕರ ಗೋಗಟೆ ಹೊಸ್ಮಠ, ಶ್ರೀಮತಿ ವಸುಧಾ ಗೋಗಟೆ, ಪಾಳಂದೆ ನರಸಿಂಹ ಭಟ್, ಪ್ರಶಾಂತ್ ಹೆಬ್ಬಾರ್ ನೆಲ್ಲಿತಡ್ಕ, ನವೀನ್ ಶೆಂಡ್ಯೆ ಅರೆಕಲ್, ದಿವಾಕರ ತಾಮ್ಮನ್ ಕರ್, ಉದಯ ಕುಮಾರ್ ಅಭ್ಯಂಕರ್, ಜಗದೀಶ , ರಾಜೇಶ್ ಬೊಳ್ಳೋಡಿ, ಸಮಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ಗೇರುಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ.93.47 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya
error: Content is protected !!