24.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇವುಗಳ ಆಶ್ರಯದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷೆ ಲಲಿತಾ ಟೀಚರ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಶುಭ ಕೋರಿದರು.

ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಬಳಂಜ ಬಿಲ್ಲವ ಸಂಘದ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ಗೌರವ ಮಾರ್ಗದರ್ಶಕ ಕೆ.ವಸಂತ ಸಾಲಿಯಾನ್ ,ಮಾಜಿ ಅಧ್ಯಕ್ಷ ವೈ ನೋಣಯ್ಯ ಪೂಜಾರಿ, ಸಂಘದ ಪ್ರ.ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿ ದಿನೇಶ್ ಕೋಟ್ಯಾನ್,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಪ್ರವೀಣ್ ಕೋಟ್ಯಾನ್, ಕಾರ್ಯದರ್ಶಿ ಶರತ್ ಅಂಚನ್,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಪುಷ್ಪಾ ಗೀರೀಶ್,ಕಾರ್ಯದರ್ಶಿ ಕಲಾವತಿ ಉಪಸ್ಥಿತರಿದ್ದರು.

ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ: ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮದಲ್ಲಿ ಆಟಿ ತಿಂಗಳಲ್ಲಿ ಸಿಗುವ ತಿಂಡಿ ತಿನಿಸುಗಳು ಪ್ರದರ್ಶನವನ್ನು ಮಾಡಲಾಯಿತು. ಸಂಘದ ಮಹಿಳಾ ಬಿಲ್ಲವ ವೇದಿಕೆಯ ಸದಸ್ಯರು ತಮ್ಮ ಮನೆಯಲ್ಲಿಯೇ ತಯಾರಿಸಿದ ತಿಂಡಿ, ತಿನಿಸುಗಳನ್ನು ತಂದು ಪ್ರದರ್ಶಿಸಿ ಎಲ್ಲರಿಗೂ ಹಂಚಿದರು.

ಬಹುಮಾನ ವಿತರಣೆ: ಕಾರ್ಯಕ್ರಮದಲ್ಲಿ ಮಕ್ಕಳಿಗೆ,ಯುವಕ,ಯುವತಿಯರಿಗೆ ವಿವಿಧ ಫನ್ನಿ ಗೇಮ್ ನಡೆಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Related posts

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ : ನೇಮೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya
error: Content is protected !!