July 23, 2026
ತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇವುಗಳ ಆಶ್ರಯದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷೆ ಲಲಿತಾ ಟೀಚರ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಶುಭ ಕೋರಿದರು.

ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಬಳಂಜ ಬಿಲ್ಲವ ಸಂಘದ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ಗೌರವ ಮಾರ್ಗದರ್ಶಕ ಕೆ.ವಸಂತ ಸಾಲಿಯಾನ್ ,ಮಾಜಿ ಅಧ್ಯಕ್ಷ ವೈ ನೋಣಯ್ಯ ಪೂಜಾರಿ, ಸಂಘದ ಪ್ರ.ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿ ದಿನೇಶ್ ಕೋಟ್ಯಾನ್,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಪ್ರವೀಣ್ ಕೋಟ್ಯಾನ್, ಕಾರ್ಯದರ್ಶಿ ಶರತ್ ಅಂಚನ್,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಪುಷ್ಪಾ ಗೀರೀಶ್,ಕಾರ್ಯದರ್ಶಿ ಕಲಾವತಿ ಉಪಸ್ಥಿತರಿದ್ದರು.

ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ: ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮದಲ್ಲಿ ಆಟಿ ತಿಂಗಳಲ್ಲಿ ಸಿಗುವ ತಿಂಡಿ ತಿನಿಸುಗಳು ಪ್ರದರ್ಶನವನ್ನು ಮಾಡಲಾಯಿತು. ಸಂಘದ ಮಹಿಳಾ ಬಿಲ್ಲವ ವೇದಿಕೆಯ ಸದಸ್ಯರು ತಮ್ಮ ಮನೆಯಲ್ಲಿಯೇ ತಯಾರಿಸಿದ ತಿಂಡಿ, ತಿನಿಸುಗಳನ್ನು ತಂದು ಪ್ರದರ್ಶಿಸಿ ಎಲ್ಲರಿಗೂ ಹಂಚಿದರು.

ಬಹುಮಾನ ವಿತರಣೆ: ಕಾರ್ಯಕ್ರಮದಲ್ಲಿ ಮಕ್ಕಳಿಗೆ,ಯುವಕ,ಯುವತಿಯರಿಗೆ ವಿವಿಧ ಫನ್ನಿ ಗೇಮ್ ನಡೆಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಸೇಕ್ರೆಡ್‌ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya
error: Content is protected !!