25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇವುಗಳ ಆಶ್ರಯದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷೆ ಲಲಿತಾ ಟೀಚರ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಶುಭ ಕೋರಿದರು.

ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಬಳಂಜ ಬಿಲ್ಲವ ಸಂಘದ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ, ಗೌರವ ಮಾರ್ಗದರ್ಶಕ ಕೆ.ವಸಂತ ಸಾಲಿಯಾನ್ ,ಮಾಜಿ ಅಧ್ಯಕ್ಷ ವೈ ನೋಣಯ್ಯ ಪೂಜಾರಿ, ಸಂಘದ ಪ್ರ.ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿ ದಿನೇಶ್ ಕೋಟ್ಯಾನ್,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಪ್ರವೀಣ್ ಕೋಟ್ಯಾನ್, ಕಾರ್ಯದರ್ಶಿ ಶರತ್ ಅಂಚನ್,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಪುಷ್ಪಾ ಗೀರೀಶ್,ಕಾರ್ಯದರ್ಶಿ ಕಲಾವತಿ ಉಪಸ್ಥಿತರಿದ್ದರು.

ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ: ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮದಲ್ಲಿ ಆಟಿ ತಿಂಗಳಲ್ಲಿ ಸಿಗುವ ತಿಂಡಿ ತಿನಿಸುಗಳು ಪ್ರದರ್ಶನವನ್ನು ಮಾಡಲಾಯಿತು. ಸಂಘದ ಮಹಿಳಾ ಬಿಲ್ಲವ ವೇದಿಕೆಯ ಸದಸ್ಯರು ತಮ್ಮ ಮನೆಯಲ್ಲಿಯೇ ತಯಾರಿಸಿದ ತಿಂಡಿ, ತಿನಿಸುಗಳನ್ನು ತಂದು ಪ್ರದರ್ಶಿಸಿ ಎಲ್ಲರಿಗೂ ಹಂಚಿದರು.

ಬಹುಮಾನ ವಿತರಣೆ: ಕಾರ್ಯಕ್ರಮದಲ್ಲಿ ಮಕ್ಕಳಿಗೆ,ಯುವಕ,ಯುವತಿಯರಿಗೆ ವಿವಿಧ ಫನ್ನಿ ಗೇಮ್ ನಡೆಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Related posts

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಇಸ್ರೇಲ್ -ಇರಾನ್ ಯುದ್ಧದ ಹಿನ್ನಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ಬೆಳ್ತಂಗಡಿ ಧರ್ಮಪ್ರಾಂತ್ಯ

Suddi Udaya

ಬಂದಾರು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಪುರುಷೋತ್ತಮ ನೇಮಕ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya
error: Content is protected !!