23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

ನಾಳ: ಟೆಕ್ಸಾಸ್ ಇನ್ಸ್ಟ್ರು ಮೆಂಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು. ಸಂಸ್ಥೆಯ ಉದ್ಯೋಗಿಗಳಾದ ಸವಿನಯ, ರಮೇಶ್ ಹಿಡಾಮಣಿ, ಮುದಿತ ಬನ್ಸಿಲ್ ಹಾಗೂ ಚಿರಾಗ್ ಶಿಲಾವಂತ್ ಇವರು ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಿಸಿ ಶುಭ ಹಾರೈಸಿದರು.

ಶಾಲಾ ಎಸ್.ಡಿ.ಯಂ.ಸಿಯ ಅಧ್ಯಕ್ಷರಾದ ಮೋಹನ್ ಗೌಡ ತಾರೆಮಾರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪಾಧ್ಯಕ್ಷರಾದ ರೀತಾ ನಾಳ ಹಾಗೂ ಸದಸ್ಯರುಗಳಾದ ಸೋಮಪ್ಪ ಗೌಡ ಕುಬಾಯಿ, ಪುಷ್ಪಾ ನಾಳ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಪಿಲಿಪ್ ಡೊನಾಲ್ಡ್ ದಿನಲ್ಲೂ ಇವರು ಸ್ವಾಗತಿಸಿ ಸಂಸ್ಥೆಯು ಮಾಡುತ್ತಿರುವ ಸಮಾಜಮುಖಿ ಕಾರ್ಯಕ್ರಮವನ್ನು ಶ್ಲಾಘಿಸಿ ಅಭಿನಂದಿಸಿದರು.

ಸಹಶಿಕ್ಷಕಿ ಕವಿತಾ, ಜಲಜಾಕ್ಷಿ.ಪಿ ಹಾಗೂ ಗೌರವ ಶಿಕ್ಷಕಿ ಮೀನಾಕ್ಷಿಯವರು ಸಹಕರಿಸಿದರು. ಹರೀಶ್ ರಾವ್ ನಾಳ ಹಾಗೂ ಚಂದ್ರಶೇಖರ ರಾವ್ ಬೆಂಗಳೂರು ಇವರು ಸಂಸ್ಥೆಯ ಪ್ರಯೋಜನ ದೊರಕಿಸಿಕೊಡಲು ಮುತುವರ್ಜಿ ವಹಿಸಿದ್ದರು.

ಸಹಶಿಕ್ಷಕಿ ಸಿಸಿಲಿಯಾ ಫ್ಲಾವಿಯಾ ಡಿಕೋಸ್ಕರವರು ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ದಮಯಂತಿ ಯಂ. ರವರು ಧನ್ಯವಾದವಿತ್ತರು.

Related posts

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya

ಧರ್ಮಸ್ಥಳದಲ್ಲಿ ಡಾ. ಹೆಗ್ಗಡೆಯವರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಅಂಗವಾಗಿ ಛದ್ಮವೇಷ ಸ್ಪರ್ಧೆ

Suddi Udaya

ಕಡಿರುದ್ಯಾವರ: ಹೇಡ್ಯದಲ್ಲಿ ಪಿಕಪ್ ಮತ್ತು ಕಾರು ಡಿಕ್ಕಿ

Suddi Udaya
error: Content is protected !!