22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

ಮೊಗ್ರು: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಮೊಗ್ರು, ಇದರ ಸಭೆಯು ಆ.20 ರಂದು ನಡೆಸಲಾಯಿತು.


ಈ ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಪದಾಧಿಕಾರಿಗಳ ಸಮ್ಮುಖದಲ್ಲಿ ಮೊಗ್ರು ಗ್ರಾಮದ ನೂತನ ಗೌಡರ ಯಾನೆ ಒಕ್ಕಲಿಗ ಸೇವ ಸಂಘ ಗ್ರಾಮ ಸಮಿತಿಯನ್ನು ರಚಿಸಲಾಯಿತು.

ಅಧ್ಯಕ್ಷರಾಗಿ ಮನೋಹರ ಗೌಡ ಅಂತರ ಮತ್ತು ಕಾರ್ಯದರ್ಶಿಯಾಗಿ ದೇಜಪ್ಪ ಗೌಡ ಅಂತರ, ಉಪಾಧ್ಯಕ್ಷರಾಗಿ ಬಾಲಕೃಷ್ಣ ಗೌಡ ಹೊಸಮನೆ, ದಯಾನಂದ ಗೌಡ ಉಂತಣಾಜೆ, ಯಾದವ ಗೌಡ ಉಳಿಯ, ಪುರಂದರ ಗೌಡ ನೈಮಾರು, ಕೋಶಾಧಿಕಾರಿಯಾಗಿ ಶಶಿಧರ್ ಗೌಡ ಉಳಿಯ ಆಯ್ಕೆಯಾದರು. ಊರಿನಲ್ಲಿ ಕಾರ್ಯಕ್ರಮದ ಗೌಡಸ್ತಿಕೆ ಮಾಡುವ ಹಿರಿಯರನ್ನು ಸಮಿತಿಯ ಗೌರಧ್ಯಕ್ಷರನ್ನಾಗಿ ಮಾಡಲಾಯಿತು.

ಮುಗೇರಡ್ಕ ವಲಯ ಸಮಿತಿಯ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಮುಗೇರಡ್ಕ, ಕಾರ್ಯದರ್ಶಿಯಾಗಿ ರಮೇಶ್ ಗೌಡ ನೆಕ್ಕರಾಜೆ, ಗೌರವಾಧ್ಯಕ್ಷರಾಗಿ, ಕೃಷ್ಣಪ್ಪ ಗೌಡ ನೈಮಾರು, ಜಿನ್ನಾಪ್ಪ ಗೌಡ ಗೌಡತಿಗೆ, ಮತ್ತು ಉಪಾಧ್ಯಕ್ಷರಾಗಿ ದೀಕ್ಷಿತ್ ಗೌಡ ನೈಮಾರು, ಪುರಂದರ ಗೌಡ ಎರ್ಮಲ, ಕೋಶಾಧಿಕಾರಿಯಾಗಿ ಜಗ್ಗದೀಶ್ ಗೌಡ ಅರ್ಬಿ ಆಯ್ಕೆ ಮಾಡಲಾಯಿತು.

ನೂತನ ಸಮಿತಿ ರಚನೆ ಮಾಡಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಧರ್ಮಸ್ಥಳ ಸೌಜನ್ಯ ಹತ್ಯೆ ಬಗ್ಗೆ ಖಂಡನೆ ವ್ಯಕ್ತಪಡಿಸಿ ಆ ಕೊಲೆಗೆ ಸಂಬಂಧಿಸಿದ ತನಿಖೆಯನ್ನು ಇನ್ನೊಮ್ಮೆ ಮಾಡಿಸಲು ಸರಕಾರಕ್ಕೆ ಒತ್ತಾಯ ಮಾಡುವ ಮನವಿ ಪತ್ರವನ್ನು ಆ.24 ರಂದು ಬಂದಾರು ಗ್ರಾಮಪಂಚಾಯತ್ ಮೊಗ್ರು ಗೌಡ ಸಂಘದ ವತಿಯಿಂದ ನೀಡುವುದು ಎಂದು ತೀರ್ಮಾನ ಮಾಡಲಾಯಿತು. ಮುಗೇರಡ್ಕ ದೈವಸ್ಥಾನದಲ್ಲಿ ನಿಜವಾದ ಆರೋಪಿಗಳಿಗೆ ದೈವಗಳು ಶಿಕ್ಷೆ ನೀಡುವಂತೆ ಪ್ರಾರ್ಥನೆ ಸಲ್ಲಿಸಲಾಯಿತು

Related posts

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು – ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya
error: Content is protected !!