April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

ಮುಂಡಾಜೆ: ಇಲ್ಲಿಯ ದೇವಿ ಗುಡಿ ಬಳಿ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ (32 ವರ್ಷ) ಅವರು ನಾಪತ್ತೆಯಾಗಿರುವುದಾಗಿ ಆ.21 ರಂದು ಧಮ೯ಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

ರಾಘವೇಂದ್ರ ಮೆಹಂದಳೆ ಅವರ ಪತ್ನಿ ಶೀಲಾ ಈ‌ ದೂರನ್ನು ನೀಡಿದ್ದು, ಗಂಡ ರಾಘವೇಂದ್ರ ಮೆಹಂದಳೆ ರವರು ಬೆಳಗ್ಗೆ 9-30 ಗಂಟೆಗೆ ಎಂದಿನಂತೆ ಅಡುಗೆ ಕೆಲಸದ ಬಗ್ಗೆ ಬಾಲಕೃಷ್ಣ ಸಹಸ್ರ ಭುಧ್ಯೆ ಎಂಬವರಲ್ಲಿಗೆ ಹೋಗುತ್ತಿದ್ದು ಬಳಿಕ ಕಾರು ವಾಶ್ ಕೊಡುವ ಬಗ್ಗೆ ತಿಳಿಸಿದ್ದರು. ಬಳಿಕ ಕ್ಯಾಟರಿಂಗ್ ಕೆಲಸ ಇರುವುದರಿಂದ ಮನೆಗೆ ಬರುವರೇ ತಡವಾಗಬಹುದು ಎಂಬುದಾಗಿ ತಿಳಿಸಿ ಮನೆಯಿಂದ ಹೋದವರು ಸುಮಾರು 12-30 ಗಂಟೆಗೆ ತನ್ನ ಮೊಬೈಲ್ ಗೆ ಕರೆ ಮಾಡಿ, ನಾನು ತಡವಾಗಿ ಬರುತ್ತೆನೆ ಎಂಬ ಸಂದೇಶವನ್ನು ಕಳುಹಿಸಿರುತ್ತಾರೆ. ಮಧ್ಯಾಹ್ನ 3-30 ಗಂಟೆಗೆ ಬಾವ ವಿಶ್ವನಾಥ ಮೆಹಂದಳೆ. ಹಾಗೂ ಸ್ನೇಹಿತರಾದ ವಿಠ್ಠಲ್. ಮನೋಜ್. ರಾಘವೇಂದ್ರ ಭಟ್. ಇವರು ಮನೆಗೆ ಬಂದು ರಾಘವೇಂದ್ರ ಮೆಹಂದಳೆ ರವರ ಮೊಬೈಲ್ ಸ್ವಿಚ್ ಆಫ್ ಆಗಿರುವ ಬಗ್ಗೆ ತಿಳಿಸಿದ್ದು, ನಾನು ಕೂಡ ಗಂಡ ರಾಘವೇಂದ್ರ ಮೆಹಂದಳೆರವರ ಮೊಬೈಲ್ ಗೆ ಅನೇಕ ಸಲ ಕರೆ ಮಾಡಿದ್ದು ಮೋಬೈಲ್ ಸ್ವಿಚ್ ಆಫ್ ಆಗಿರುವುದು ಕಂಡು ಬಂದಿದೆ. ನಂತರ ನೆರೆಕೆರೆ ಹಾಗೂ ಸಂಬಂಧಿಕರ ಮನೆಗೆ ವಿಚಾರಿಸಿದ್ದಲ್ಲಿ ಎಲ್ಲಯೂ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಧಮ೯ಸ್ಥಳ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!