March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

ಮುಂಡಾಜೆ: ಇಲ್ಲಿಯ ದೇವಿ ಗುಡಿ ಬಳಿ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ (32 ವರ್ಷ) ಅವರು ನಾಪತ್ತೆಯಾಗಿರುವುದಾಗಿ ಆ.21 ರಂದು ಧಮ೯ಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

ರಾಘವೇಂದ್ರ ಮೆಹಂದಳೆ ಅವರ ಪತ್ನಿ ಶೀಲಾ ಈ‌ ದೂರನ್ನು ನೀಡಿದ್ದು, ಗಂಡ ರಾಘವೇಂದ್ರ ಮೆಹಂದಳೆ ರವರು ಬೆಳಗ್ಗೆ 9-30 ಗಂಟೆಗೆ ಎಂದಿನಂತೆ ಅಡುಗೆ ಕೆಲಸದ ಬಗ್ಗೆ ಬಾಲಕೃಷ್ಣ ಸಹಸ್ರ ಭುಧ್ಯೆ ಎಂಬವರಲ್ಲಿಗೆ ಹೋಗುತ್ತಿದ್ದು ಬಳಿಕ ಕಾರು ವಾಶ್ ಕೊಡುವ ಬಗ್ಗೆ ತಿಳಿಸಿದ್ದರು. ಬಳಿಕ ಕ್ಯಾಟರಿಂಗ್ ಕೆಲಸ ಇರುವುದರಿಂದ ಮನೆಗೆ ಬರುವರೇ ತಡವಾಗಬಹುದು ಎಂಬುದಾಗಿ ತಿಳಿಸಿ ಮನೆಯಿಂದ ಹೋದವರು ಸುಮಾರು 12-30 ಗಂಟೆಗೆ ತನ್ನ ಮೊಬೈಲ್ ಗೆ ಕರೆ ಮಾಡಿ, ನಾನು ತಡವಾಗಿ ಬರುತ್ತೆನೆ ಎಂಬ ಸಂದೇಶವನ್ನು ಕಳುಹಿಸಿರುತ್ತಾರೆ. ಮಧ್ಯಾಹ್ನ 3-30 ಗಂಟೆಗೆ ಬಾವ ವಿಶ್ವನಾಥ ಮೆಹಂದಳೆ. ಹಾಗೂ ಸ್ನೇಹಿತರಾದ ವಿಠ್ಠಲ್. ಮನೋಜ್. ರಾಘವೇಂದ್ರ ಭಟ್. ಇವರು ಮನೆಗೆ ಬಂದು ರಾಘವೇಂದ್ರ ಮೆಹಂದಳೆ ರವರ ಮೊಬೈಲ್ ಸ್ವಿಚ್ ಆಫ್ ಆಗಿರುವ ಬಗ್ಗೆ ತಿಳಿಸಿದ್ದು, ನಾನು ಕೂಡ ಗಂಡ ರಾಘವೇಂದ್ರ ಮೆಹಂದಳೆರವರ ಮೊಬೈಲ್ ಗೆ ಅನೇಕ ಸಲ ಕರೆ ಮಾಡಿದ್ದು ಮೋಬೈಲ್ ಸ್ವಿಚ್ ಆಫ್ ಆಗಿರುವುದು ಕಂಡು ಬಂದಿದೆ. ನಂತರ ನೆರೆಕೆರೆ ಹಾಗೂ ಸಂಬಂಧಿಕರ ಮನೆಗೆ ವಿಚಾರಿಸಿದ್ದಲ್ಲಿ ಎಲ್ಲಯೂ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಧಮ೯ಸ್ಥಳ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

Suddi Udaya

ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿದ ‘ಆಸರೆ’ – ಕುಂಭಶ್ರೀ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆಗೆ ಅಭೂತಪೂರ್ವ ಸ್ಪಂದನೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಪಿ.ಕೋಟ್ಯಾನ್ ಪುನರಾಯ್ಕೆ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya
error: Content is protected !!