25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

ಮುಂಡಾಜೆ: ಇಲ್ಲಿಯ ದೇವಿ ಗುಡಿ ಬಳಿ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ (32 ವರ್ಷ) ಅವರು ನಾಪತ್ತೆಯಾಗಿರುವುದಾಗಿ ಆ.21 ರಂದು ಧಮ೯ಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

ರಾಘವೇಂದ್ರ ಮೆಹಂದಳೆ ಅವರ ಪತ್ನಿ ಶೀಲಾ ಈ‌ ದೂರನ್ನು ನೀಡಿದ್ದು, ಗಂಡ ರಾಘವೇಂದ್ರ ಮೆಹಂದಳೆ ರವರು ಬೆಳಗ್ಗೆ 9-30 ಗಂಟೆಗೆ ಎಂದಿನಂತೆ ಅಡುಗೆ ಕೆಲಸದ ಬಗ್ಗೆ ಬಾಲಕೃಷ್ಣ ಸಹಸ್ರ ಭುಧ್ಯೆ ಎಂಬವರಲ್ಲಿಗೆ ಹೋಗುತ್ತಿದ್ದು ಬಳಿಕ ಕಾರು ವಾಶ್ ಕೊಡುವ ಬಗ್ಗೆ ತಿಳಿಸಿದ್ದರು. ಬಳಿಕ ಕ್ಯಾಟರಿಂಗ್ ಕೆಲಸ ಇರುವುದರಿಂದ ಮನೆಗೆ ಬರುವರೇ ತಡವಾಗಬಹುದು ಎಂಬುದಾಗಿ ತಿಳಿಸಿ ಮನೆಯಿಂದ ಹೋದವರು ಸುಮಾರು 12-30 ಗಂಟೆಗೆ ತನ್ನ ಮೊಬೈಲ್ ಗೆ ಕರೆ ಮಾಡಿ, ನಾನು ತಡವಾಗಿ ಬರುತ್ತೆನೆ ಎಂಬ ಸಂದೇಶವನ್ನು ಕಳುಹಿಸಿರುತ್ತಾರೆ. ಮಧ್ಯಾಹ್ನ 3-30 ಗಂಟೆಗೆ ಬಾವ ವಿಶ್ವನಾಥ ಮೆಹಂದಳೆ. ಹಾಗೂ ಸ್ನೇಹಿತರಾದ ವಿಠ್ಠಲ್. ಮನೋಜ್. ರಾಘವೇಂದ್ರ ಭಟ್. ಇವರು ಮನೆಗೆ ಬಂದು ರಾಘವೇಂದ್ರ ಮೆಹಂದಳೆ ರವರ ಮೊಬೈಲ್ ಸ್ವಿಚ್ ಆಫ್ ಆಗಿರುವ ಬಗ್ಗೆ ತಿಳಿಸಿದ್ದು, ನಾನು ಕೂಡ ಗಂಡ ರಾಘವೇಂದ್ರ ಮೆಹಂದಳೆರವರ ಮೊಬೈಲ್ ಗೆ ಅನೇಕ ಸಲ ಕರೆ ಮಾಡಿದ್ದು ಮೋಬೈಲ್ ಸ್ವಿಚ್ ಆಫ್ ಆಗಿರುವುದು ಕಂಡು ಬಂದಿದೆ. ನಂತರ ನೆರೆಕೆರೆ ಹಾಗೂ ಸಂಬಂಧಿಕರ ಮನೆಗೆ ವಿಚಾರಿಸಿದ್ದಲ್ಲಿ ಎಲ್ಲಯೂ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಧಮ೯ಸ್ಥಳ‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ

Suddi Udaya

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!