25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

ಅರಸಿನಮಕ್ಕಿ : ಸುದೆಗಂಡಿ ಕಿರುಸೇತುವೆಯ ತಡೆಬೇಲಿಯ ಕಾಮಗಾರಿ ಮುಗಿದು ಜಮೆ – ಖರ್ಚುಗಳ ಸಭೆ ಆ.18 ರಂದು ದರ್ಭೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಳದ ಸಭಾಭವನದಲ್ಲಿ ನಡೆಯಿತು.

ಸಮಿತಿಯ ಅಧ್ಯಕ್ಷರಾದ ಕರುಣಾಕರ ಗೋಗಟೆಯವರು ಮಾತನಾಡಿ ಕಾಮಗಾರಿಗಳಿಗಾಗಿ ಧನಸಂಗ್ರಹ ಮತ್ತು ಧನಸಹಾಯ ಮಾಡಿದ ಮಹನೀಯರಿಗೆ ಮತ್ತು ಕ್ಲಪ್ತ ಸಮಯದಲ್ಲಿ ಕೆಲಸ ನಿರ್ವಹಿಸಿದ ಮಾಸ್ಟರ್ ಪ್ಲಾನರಿ, ಪುತ್ತೂರು ಇವರಿಗೆ ಕೃತಜ್ಞತಾ ಪೂರ್ವಕವಾಗಿ ಅಭಿನಂದಿಸಿದರು. ಕಾರ್ಯದರ್ಶಿ ಪ್ರಶಾಂತ್ ಹೆಬ್ಬಾರು ಜಮೆ ಖರ್ಚುಗಳನ್ನು ಸಭೆಗೆ ತಿಳಿಸಿದರು. ಒಟ್ಟು ಜಮೆ ರೂ. 2,64,562, ಖರ್ಚು ರೂ.1,71,100, ಉಳಿಕೆ ರೂ. 93,462 ಮೊತ್ತವು ಸಮಿತಿಯಲ್ಲಿದೆ.

ಸಭೆಯಲ್ಲಿ ಉಳಿಕೆ ಮೊತ್ತದ ಬಗ್ಗೆ ಚರ್ಚೆಯಾಗಿ ಪುನಃ ಸೇತುವೆಯ ಉಳಿದ ಭಾಗಕ್ಕೆ ಶಾಶ್ವತ ತಡೆಬೇಲಿಯನ್ನು ನಿರ್ಮಾಣ ಮಾಡುವುದೆಂದು ನಿರ್ಣಯಿಸಲಾಯಿತು. ಆದರೆ ಉಳಿಕೆ ಮೊತ್ತ ಸಾಲದೇ ಇರುವುದರಿಂದ ಇನ್ನು ಸುಮಾರು ರೂ.90ಸಾವಿರ ವನ್ನು ದಾನಿಗಳಿಂದ ಸಂಗ್ರಹಿಸುವುದೆಂದು, ಮುಂದೆ ಸೆಪ್ಟೆಂಬರ್ ತಿಂಗಳಿನಲ್ಲಿ 2ನೇ ಹಂತದ ಕಾಮಗಾರಿಯನ್ನು ಮಾಡುವುದೆಂದು ನಿರ್ಣಯಿಸಲಾಯಿತು.

ಇದರೊಂದಿಗೆ ಸೇತುವೆಯ ದೃಢವಾಗಿ ಸರ್ವಋತುಗಳಲ್ಲೂ ಸುಗಮ ಸಂಚಾರ ಯೋಗ್ಯವಾಗಲಿದೆ. ಇದಕ್ಕೆ ಜನರ ಸಹಕಾರ ಅತ್ಯಗತ್ಯವಾಗಿದೆ ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ.

ಸಭೆಯಲ್ಲಿ ಕರುಣಾಕರ ಗೋಗಟೆ ಹೊಸ್ಮಠ, ಶ್ರೀಮತಿ ವಸುಧಾ ಗೋಗಟೆ, ಪಾಳಂದೆ ನರಸಿಂಹ ಭಟ್, ಪ್ರಶಾಂತ್ ಹೆಬ್ಬಾರ್ ನೆಲ್ಲಿತಡ್ಕ, ನವೀನ್ ಶೆಂಡ್ಯೆ ಅರೆಕಲ್, ದಿವಾಕರ ತಾಮ್ಮನ್ ಕರ್, ಉದಯ ಕುಮಾರ್ ಅಭ್ಯಂಕರ್, ಜಗದೀಶ , ರಾಜೇಶ್ ಬೊಳ್ಳೋಡಿ, ಸಮಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya
error: Content is protected !!