24 C
ಪುತ್ತೂರು, ಬೆಳ್ತಂಗಡಿ
July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

ಅರಸಿನಮಕ್ಕಿ : ಸುದೆಗಂಡಿ ಕಿರುಸೇತುವೆಯ ತಡೆಬೇಲಿಯ ಕಾಮಗಾರಿ ಮುಗಿದು ಜಮೆ – ಖರ್ಚುಗಳ ಸಭೆ ಆ.18 ರಂದು ದರ್ಭೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಳದ ಸಭಾಭವನದಲ್ಲಿ ನಡೆಯಿತು.

ಸಮಿತಿಯ ಅಧ್ಯಕ್ಷರಾದ ಕರುಣಾಕರ ಗೋಗಟೆಯವರು ಮಾತನಾಡಿ ಕಾಮಗಾರಿಗಳಿಗಾಗಿ ಧನಸಂಗ್ರಹ ಮತ್ತು ಧನಸಹಾಯ ಮಾಡಿದ ಮಹನೀಯರಿಗೆ ಮತ್ತು ಕ್ಲಪ್ತ ಸಮಯದಲ್ಲಿ ಕೆಲಸ ನಿರ್ವಹಿಸಿದ ಮಾಸ್ಟರ್ ಪ್ಲಾನರಿ, ಪುತ್ತೂರು ಇವರಿಗೆ ಕೃತಜ್ಞತಾ ಪೂರ್ವಕವಾಗಿ ಅಭಿನಂದಿಸಿದರು. ಕಾರ್ಯದರ್ಶಿ ಪ್ರಶಾಂತ್ ಹೆಬ್ಬಾರು ಜಮೆ ಖರ್ಚುಗಳನ್ನು ಸಭೆಗೆ ತಿಳಿಸಿದರು. ಒಟ್ಟು ಜಮೆ ರೂ. 2,64,562, ಖರ್ಚು ರೂ.1,71,100, ಉಳಿಕೆ ರೂ. 93,462 ಮೊತ್ತವು ಸಮಿತಿಯಲ್ಲಿದೆ.

ಸಭೆಯಲ್ಲಿ ಉಳಿಕೆ ಮೊತ್ತದ ಬಗ್ಗೆ ಚರ್ಚೆಯಾಗಿ ಪುನಃ ಸೇತುವೆಯ ಉಳಿದ ಭಾಗಕ್ಕೆ ಶಾಶ್ವತ ತಡೆಬೇಲಿಯನ್ನು ನಿರ್ಮಾಣ ಮಾಡುವುದೆಂದು ನಿರ್ಣಯಿಸಲಾಯಿತು. ಆದರೆ ಉಳಿಕೆ ಮೊತ್ತ ಸಾಲದೇ ಇರುವುದರಿಂದ ಇನ್ನು ಸುಮಾರು ರೂ.90ಸಾವಿರ ವನ್ನು ದಾನಿಗಳಿಂದ ಸಂಗ್ರಹಿಸುವುದೆಂದು, ಮುಂದೆ ಸೆಪ್ಟೆಂಬರ್ ತಿಂಗಳಿನಲ್ಲಿ 2ನೇ ಹಂತದ ಕಾಮಗಾರಿಯನ್ನು ಮಾಡುವುದೆಂದು ನಿರ್ಣಯಿಸಲಾಯಿತು.

ಇದರೊಂದಿಗೆ ಸೇತುವೆಯ ದೃಢವಾಗಿ ಸರ್ವಋತುಗಳಲ್ಲೂ ಸುಗಮ ಸಂಚಾರ ಯೋಗ್ಯವಾಗಲಿದೆ. ಇದಕ್ಕೆ ಜನರ ಸಹಕಾರ ಅತ್ಯಗತ್ಯವಾಗಿದೆ ಎಂದು ಸಮಿತಿಯು ಅಭಿಪ್ರಾಯಪಟ್ಟಿದೆ.

ಸಭೆಯಲ್ಲಿ ಕರುಣಾಕರ ಗೋಗಟೆ ಹೊಸ್ಮಠ, ಶ್ರೀಮತಿ ವಸುಧಾ ಗೋಗಟೆ, ಪಾಳಂದೆ ನರಸಿಂಹ ಭಟ್, ಪ್ರಶಾಂತ್ ಹೆಬ್ಬಾರ್ ನೆಲ್ಲಿತಡ್ಕ, ನವೀನ್ ಶೆಂಡ್ಯೆ ಅರೆಕಲ್, ದಿವಾಕರ ತಾಮ್ಮನ್ ಕರ್, ಉದಯ ಕುಮಾರ್ ಅಭ್ಯಂಕರ್, ಜಗದೀಶ , ರಾಜೇಶ್ ಬೊಳ್ಳೋಡಿ, ಸಮಿತಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸಿದ್ದಪಡಿಸಿದ ಸಂಶೋಧನಾ ವರದಿ ಬಿಡುಗಡೆ

Suddi Udaya

ಕಾರಿನಲ್ಲಿ ನಿಷೇಧಿತ MDMA ಮಾದಕವಸ್ತು ಸಾಗಾಟ: ವೇಣೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya
error: Content is protected !!