July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

ಬೆಳ್ತಂಗಡಿ: ಧಮ೯ಸ್ಥಳ ಗ್ರಾಮದ ಪಾಂಗಾಳ ಕು. ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಆ.21ರಂದುಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.

ಸೌಜನ್ಯ ಮೃತದೇಹ ದೊರೆತ ಸ್ಥಳಕ್ಕೆ ಹೋಗಿ , ಪೊಲೀಸರಿಂದ ಮಾಹಿತಿಗಳನ್ನು ಪಡೆದುಕೊಂಡರು. ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮಾವ ವಿಠಲ ಗೌಡ ಅವರಿಂದ ಮಾಹಿತಿಗಳನ್ನು ಪಡೆದು ಕೊಂಡರು. ಈ ಪ್ರಕರಣದಲ್ಲಿ ಆಯೋಗ ಯಾವ ರೀತಿಯಾಗಿ ಕೆಲಸ ಮಾಡಬಹುದು ಎಂಬ ವಿಚಾರವನ್ನು ಪರಿಶೀಲಿಸುತ್ತೇವೆ, ಕಾನೂನು ಪ್ರಕಾರವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಯೋಗ ಸಿದ್ದವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

‌ಸೌಜನ್ಯಳ ಸಹೋದರರ ಶಿಕ್ಷಣ ಮುಗಿದಿದ್ದು ಮನೆಯಲ್ಲಿ ಯಾರಿಗಾದರೂ ಸರಕಾರಿ ಉದ್ಯೋಗ ನೀಡಲು ಸಾದ್ಯವಿದೆಯೇ ಎಂಬುದನ್ನು ಪರಿಶೀಲಿಸುವುದಾಗಿಯೂ ಅವರು ತಿಳಿಸಿದರು.

ಈ ಪರಿಸರಕ್ಕೆ ಬಸ್ಸಿನ ವ್ಯವಸ್ಥೆ ಮಾಡಬೇಕು ಹಾಗೂ ಇಲ್ಲೊಂದು ಅಂಗನವಾಡಿ ಕೇಂದ್ರವಿರಬೇಕು ಎಂಬ ಬಗೆಗೆ ಬಹುದಿನಗಳಿಂದ ಬೇಡಿಕೆಯಿರುವುದಾಗಿ ಸೌಜನ್ಯಳ ಮನೆಯವರು ತಿಳಿಸಿದಾಗ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಿಡಿಪಿಒ ಪ್ರಿಯಾ ಆಗ್ನೆಸ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ಮುಂಡೂರು: ಶಿವಪ್ರಸಾದ್ ನಾನಿಲ್ತ್ಯಾರು ನಿವಾಸಿ ಆನಂದ ಸಾಲಿಯಾನ್ ನಿಧನ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಶ್ರೇಯಸ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!