23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕು.ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಭೇಟಿ

ಬೆಳ್ತಂಗಡಿ: ಧಮ೯ಸ್ಥಳ ಗ್ರಾಮದ ಪಾಂಗಾಳ ಕು. ಸೌಜನ್ಯಳ ಮನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಆ.21ರಂದುಭೇಟಿ ನೀಡಿ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.

ಸೌಜನ್ಯ ಮೃತದೇಹ ದೊರೆತ ಸ್ಥಳಕ್ಕೆ ಹೋಗಿ , ಪೊಲೀಸರಿಂದ ಮಾಹಿತಿಗಳನ್ನು ಪಡೆದುಕೊಂಡರು. ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮಾವ ವಿಠಲ ಗೌಡ ಅವರಿಂದ ಮಾಹಿತಿಗಳನ್ನು ಪಡೆದು ಕೊಂಡರು. ಈ ಪ್ರಕರಣದಲ್ಲಿ ಆಯೋಗ ಯಾವ ರೀತಿಯಾಗಿ ಕೆಲಸ ಮಾಡಬಹುದು ಎಂಬ ವಿಚಾರವನ್ನು ಪರಿಶೀಲಿಸುತ್ತೇವೆ, ಕಾನೂನು ಪ್ರಕಾರವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಆಯೋಗ ಸಿದ್ದವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

‌ಸೌಜನ್ಯಳ ಸಹೋದರರ ಶಿಕ್ಷಣ ಮುಗಿದಿದ್ದು ಮನೆಯಲ್ಲಿ ಯಾರಿಗಾದರೂ ಸರಕಾರಿ ಉದ್ಯೋಗ ನೀಡಲು ಸಾದ್ಯವಿದೆಯೇ ಎಂಬುದನ್ನು ಪರಿಶೀಲಿಸುವುದಾಗಿಯೂ ಅವರು ತಿಳಿಸಿದರು.

ಈ ಪರಿಸರಕ್ಕೆ ಬಸ್ಸಿನ ವ್ಯವಸ್ಥೆ ಮಾಡಬೇಕು ಹಾಗೂ ಇಲ್ಲೊಂದು ಅಂಗನವಾಡಿ ಕೇಂದ್ರವಿರಬೇಕು ಎಂಬ ಬಗೆಗೆ ಬಹುದಿನಗಳಿಂದ ಬೇಡಿಕೆಯಿರುವುದಾಗಿ ಸೌಜನ್ಯಳ ಮನೆಯವರು ತಿಳಿಸಿದಾಗ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಿಡಿಪಿಒ ಪ್ರಿಯಾ ಆಗ್ನೆಸ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya
error: Content is protected !!