25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

ಬೆಳ್ತಂಗಡಿ; ಎರಡು ದಿನಗಳ ಹಿಂದೆ ವಗ್ಗ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಂಬುಲೆನ್ಸ್‌ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರೆ, ಅದರಲ್ಲಿ ಗಾಯಾಳುವಾಗಿದ್ದ ಅಳದಂಗಡಿ ಸನಿಹದ ಮಹಿಳೆ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.


ಆ ಮೂಲಕ ಸದ್ರಿ ಅಪಘಾತದಲ್ಲಿ‌ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿದೆ. ಮೃತ ಮಹಿಳೆಯನ್ನು ಅಳದಂಗಡಿ ಸನಿಹದ ಬಡಗಕಾರಂದೂರು ಗ್ರಾಮದ ಸುಂಕದಕಟ್ಟೆ ನಿವಾಸಿ ದಿವಂಗತ ಹಸನ್ ಅವರ ಪತ್ನಿ ಮರಿಯಮ್ಮ ( 80 ) ಎಂಬವರೆಂದು ಗುರುತಿಸಲಾಗಿದೆ.

ಶುಕ್ರವಾರ ದಿನ ಮಹಿಳೆಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾಯನಕೆರೆ ಅಭಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಇಸಿಜಿ ಸಹಿತ ತುರ್ತು‌ಚಿಕಿತ್ಸೆ ನೀಡಿ, ಹೃದಯನಾಳಗಳಲ್ಲಿ ಬ್ಲಾಕ್ ಇರುವುದದಿಂದ ವೈದ್ಯರು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದರು. ಅಂತೆಯೇ ಶಬೀರ್ ಅವರ ಆಂಬುಲೆನ್ಸ್‌ ನಲ್ಲಿ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ವಗ್ಗ ಬಳಿ ಅಪಘಾತ ನಡೆದಿತ್ತು. ಈ ವೇಳೆ ಚಾಲಕ ಶಬೀರ್ ತೀವ್ರ ಗಾಯಗೊಂಡು ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದರು.

ಅಪಘಾತದಿಂದ ಮಹಿಳೆಯ ತಲೆಗೆ ಗಾಯ:
ಹೃದಯದ ತೊಂದರೆ ಇದ್ದ ಮಹಿಳೆಗೆ ಅಪಘಾತದ ವೇಳೆ ತಲೆಗೆ ಗಾಯಗಳಾಗಿ ರಕ್ತಸ್ರಾವವಾಗಿತ್ತು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಮ್‌ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೂ ಅಲ್ಲದೆ ಆ ವೇಳೆ ಅಂಬುಲೆನ್ಸ್‌ನಲ್ಲಿ ಅವರ ಜೊತೆ ಇದ್ದ ಅವರ ಪುತ್ರ ರಝಾಕ್ ಅವರಿಗೆ ಕೈಯ ಮೂಳೆಮುರಿತಕ್ಕೊಳಗಾಗಿದ್ದು ಅವರು ಚಿಕಿತ್ಸೆಯಲ್ಲಿದ್ದಾರೆ.
ಮೃತರು ಇದ್ದ ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!