24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

ಬೆಳ್ತಂಗಡಿ; ಎರಡು ದಿನಗಳ ಹಿಂದೆ ವಗ್ಗ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಂಬುಲೆನ್ಸ್‌ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರೆ, ಅದರಲ್ಲಿ ಗಾಯಾಳುವಾಗಿದ್ದ ಅಳದಂಗಡಿ ಸನಿಹದ ಮಹಿಳೆ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.


ಆ ಮೂಲಕ ಸದ್ರಿ ಅಪಘಾತದಲ್ಲಿ‌ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿದೆ. ಮೃತ ಮಹಿಳೆಯನ್ನು ಅಳದಂಗಡಿ ಸನಿಹದ ಬಡಗಕಾರಂದೂರು ಗ್ರಾಮದ ಸುಂಕದಕಟ್ಟೆ ನಿವಾಸಿ ದಿವಂಗತ ಹಸನ್ ಅವರ ಪತ್ನಿ ಮರಿಯಮ್ಮ ( 80 ) ಎಂಬವರೆಂದು ಗುರುತಿಸಲಾಗಿದೆ.

ಶುಕ್ರವಾರ ದಿನ ಮಹಿಳೆಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾಯನಕೆರೆ ಅಭಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಇಸಿಜಿ ಸಹಿತ ತುರ್ತು‌ಚಿಕಿತ್ಸೆ ನೀಡಿ, ಹೃದಯನಾಳಗಳಲ್ಲಿ ಬ್ಲಾಕ್ ಇರುವುದದಿಂದ ವೈದ್ಯರು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದರು. ಅಂತೆಯೇ ಶಬೀರ್ ಅವರ ಆಂಬುಲೆನ್ಸ್‌ ನಲ್ಲಿ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ವಗ್ಗ ಬಳಿ ಅಪಘಾತ ನಡೆದಿತ್ತು. ಈ ವೇಳೆ ಚಾಲಕ ಶಬೀರ್ ತೀವ್ರ ಗಾಯಗೊಂಡು ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದರು.

ಅಪಘಾತದಿಂದ ಮಹಿಳೆಯ ತಲೆಗೆ ಗಾಯ:
ಹೃದಯದ ತೊಂದರೆ ಇದ್ದ ಮಹಿಳೆಗೆ ಅಪಘಾತದ ವೇಳೆ ತಲೆಗೆ ಗಾಯಗಳಾಗಿ ರಕ್ತಸ್ರಾವವಾಗಿತ್ತು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಮ್‌ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೂ ಅಲ್ಲದೆ ಆ ವೇಳೆ ಅಂಬುಲೆನ್ಸ್‌ನಲ್ಲಿ ಅವರ ಜೊತೆ ಇದ್ದ ಅವರ ಪುತ್ರ ರಝಾಕ್ ಅವರಿಗೆ ಕೈಯ ಮೂಳೆಮುರಿತಕ್ಕೊಳಗಾಗಿದ್ದು ಅವರು ಚಿಕಿತ್ಸೆಯಲ್ಲಿದ್ದಾರೆ.
ಮೃತರು ಇದ್ದ ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya
error: Content is protected !!