April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

ಬೆಳ್ತಂಗಡಿ; ಎರಡು ದಿನಗಳ ಹಿಂದೆ ವಗ್ಗ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಂಬುಲೆನ್ಸ್‌ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರೆ, ಅದರಲ್ಲಿ ಗಾಯಾಳುವಾಗಿದ್ದ ಅಳದಂಗಡಿ ಸನಿಹದ ಮಹಿಳೆ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.


ಆ ಮೂಲಕ ಸದ್ರಿ ಅಪಘಾತದಲ್ಲಿ‌ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿದೆ. ಮೃತ ಮಹಿಳೆಯನ್ನು ಅಳದಂಗಡಿ ಸನಿಹದ ಬಡಗಕಾರಂದೂರು ಗ್ರಾಮದ ಸುಂಕದಕಟ್ಟೆ ನಿವಾಸಿ ದಿವಂಗತ ಹಸನ್ ಅವರ ಪತ್ನಿ ಮರಿಯಮ್ಮ ( 80 ) ಎಂಬವರೆಂದು ಗುರುತಿಸಲಾಗಿದೆ.

ಶುಕ್ರವಾರ ದಿನ ಮಹಿಳೆಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾಯನಕೆರೆ ಅಭಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಇಸಿಜಿ ಸಹಿತ ತುರ್ತು‌ಚಿಕಿತ್ಸೆ ನೀಡಿ, ಹೃದಯನಾಳಗಳಲ್ಲಿ ಬ್ಲಾಕ್ ಇರುವುದದಿಂದ ವೈದ್ಯರು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದರು. ಅಂತೆಯೇ ಶಬೀರ್ ಅವರ ಆಂಬುಲೆನ್ಸ್‌ ನಲ್ಲಿ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ವಗ್ಗ ಬಳಿ ಅಪಘಾತ ನಡೆದಿತ್ತು. ಈ ವೇಳೆ ಚಾಲಕ ಶಬೀರ್ ತೀವ್ರ ಗಾಯಗೊಂಡು ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದರು.

ಅಪಘಾತದಿಂದ ಮಹಿಳೆಯ ತಲೆಗೆ ಗಾಯ:
ಹೃದಯದ ತೊಂದರೆ ಇದ್ದ ಮಹಿಳೆಗೆ ಅಪಘಾತದ ವೇಳೆ ತಲೆಗೆ ಗಾಯಗಳಾಗಿ ರಕ್ತಸ್ರಾವವಾಗಿತ್ತು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಮ್‌ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೂ ಅಲ್ಲದೆ ಆ ವೇಳೆ ಅಂಬುಲೆನ್ಸ್‌ನಲ್ಲಿ ಅವರ ಜೊತೆ ಇದ್ದ ಅವರ ಪುತ್ರ ರಝಾಕ್ ಅವರಿಗೆ ಕೈಯ ಮೂಳೆಮುರಿತಕ್ಕೊಳಗಾಗಿದ್ದು ಅವರು ಚಿಕಿತ್ಸೆಯಲ್ಲಿದ್ದಾರೆ.
ಮೃತರು ಇದ್ದ ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

Suddi Udaya
error: Content is protected !!