ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

ಬೆಳ್ತಂಗಡಿ; ಎರಡು ದಿನಗಳ ಹಿಂದೆ ವಗ್ಗ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಂಬುಲೆನ್ಸ್‌ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರೆ, ಅದರಲ್ಲಿ ಗಾಯಾಳುವಾಗಿದ್ದ ಅಳದಂಗಡಿ ಸನಿಹದ ಮಹಿಳೆ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.


ಆ ಮೂಲಕ ಸದ್ರಿ ಅಪಘಾತದಲ್ಲಿ‌ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿದೆ. ಮೃತ ಮಹಿಳೆಯನ್ನು ಅಳದಂಗಡಿ ಸನಿಹದ ಬಡಗಕಾರಂದೂರು ಗ್ರಾಮದ ಸುಂಕದಕಟ್ಟೆ ನಿವಾಸಿ ದಿವಂಗತ ಹಸನ್ ಅವರ ಪತ್ನಿ ಮರಿಯಮ್ಮ ( 80 ) ಎಂಬವರೆಂದು ಗುರುತಿಸಲಾಗಿದೆ.

ಶುಕ್ರವಾರ ದಿನ ಮಹಿಳೆಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾಯನಕೆರೆ ಅಭಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಇಸಿಜಿ ಸಹಿತ ತುರ್ತು‌ಚಿಕಿತ್ಸೆ ನೀಡಿ, ಹೃದಯನಾಳಗಳಲ್ಲಿ ಬ್ಲಾಕ್ ಇರುವುದದಿಂದ ವೈದ್ಯರು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದರು. ಅಂತೆಯೇ ಶಬೀರ್ ಅವರ ಆಂಬುಲೆನ್ಸ್‌ ನಲ್ಲಿ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ವಗ್ಗ ಬಳಿ ಅಪಘಾತ ನಡೆದಿತ್ತು. ಈ ವೇಳೆ ಚಾಲಕ ಶಬೀರ್ ತೀವ್ರ ಗಾಯಗೊಂಡು ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದರು.

ಅಪಘಾತದಿಂದ ಮಹಿಳೆಯ ತಲೆಗೆ ಗಾಯ:
ಹೃದಯದ ತೊಂದರೆ ಇದ್ದ ಮಹಿಳೆಗೆ ಅಪಘಾತದ ವೇಳೆ ತಲೆಗೆ ಗಾಯಗಳಾಗಿ ರಕ್ತಸ್ರಾವವಾಗಿತ್ತು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಮ್‌ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೂ ಅಲ್ಲದೆ ಆ ವೇಳೆ ಅಂಬುಲೆನ್ಸ್‌ನಲ್ಲಿ ಅವರ ಜೊತೆ ಇದ್ದ ಅವರ ಪುತ್ರ ರಝಾಕ್ ಅವರಿಗೆ ಕೈಯ ಮೂಳೆಮುರಿತಕ್ಕೊಳಗಾಗಿದ್ದು ಅವರು ಚಿಕಿತ್ಸೆಯಲ್ಲಿದ್ದಾರೆ.
ಮೃತರು ಇದ್ದ ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya
error: Content is protected !!