July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

ಬೆಳ್ತಂಗಡಿ; ಎರಡು ದಿನಗಳ ಹಿಂದೆ ವಗ್ಗ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಂಬುಲೆನ್ಸ್‌ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರೆ, ಅದರಲ್ಲಿ ಗಾಯಾಳುವಾಗಿದ್ದ ಅಳದಂಗಡಿ ಸನಿಹದ ಮಹಿಳೆ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.


ಆ ಮೂಲಕ ಸದ್ರಿ ಅಪಘಾತದಲ್ಲಿ‌ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿದೆ. ಮೃತ ಮಹಿಳೆಯನ್ನು ಅಳದಂಗಡಿ ಸನಿಹದ ಬಡಗಕಾರಂದೂರು ಗ್ರಾಮದ ಸುಂಕದಕಟ್ಟೆ ನಿವಾಸಿ ದಿವಂಗತ ಹಸನ್ ಅವರ ಪತ್ನಿ ಮರಿಯಮ್ಮ ( 80 ) ಎಂಬವರೆಂದು ಗುರುತಿಸಲಾಗಿದೆ.

ಶುಕ್ರವಾರ ದಿನ ಮಹಿಳೆಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾಯನಕೆರೆ ಅಭಯಾ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಇಸಿಜಿ ಸಹಿತ ತುರ್ತು‌ಚಿಕಿತ್ಸೆ ನೀಡಿ, ಹೃದಯನಾಳಗಳಲ್ಲಿ ಬ್ಲಾಕ್ ಇರುವುದದಿಂದ ವೈದ್ಯರು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದರು. ಅಂತೆಯೇ ಶಬೀರ್ ಅವರ ಆಂಬುಲೆನ್ಸ್‌ ನಲ್ಲಿ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ವಗ್ಗ ಬಳಿ ಅಪಘಾತ ನಡೆದಿತ್ತು. ಈ ವೇಳೆ ಚಾಲಕ ಶಬೀರ್ ತೀವ್ರ ಗಾಯಗೊಂಡು ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದರು.

ಅಪಘಾತದಿಂದ ಮಹಿಳೆಯ ತಲೆಗೆ ಗಾಯ:
ಹೃದಯದ ತೊಂದರೆ ಇದ್ದ ಮಹಿಳೆಗೆ ಅಪಘಾತದ ವೇಳೆ ತಲೆಗೆ ಗಾಯಗಳಾಗಿ ರಕ್ತಸ್ರಾವವಾಗಿತ್ತು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಮ್‌ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೂ ಅಲ್ಲದೆ ಆ ವೇಳೆ ಅಂಬುಲೆನ್ಸ್‌ನಲ್ಲಿ ಅವರ ಜೊತೆ ಇದ್ದ ಅವರ ಪುತ್ರ ರಝಾಕ್ ಅವರಿಗೆ ಕೈಯ ಮೂಳೆಮುರಿತಕ್ಕೊಳಗಾಗಿದ್ದು ಅವರು ಚಿಕಿತ್ಸೆಯಲ್ಲಿದ್ದಾರೆ.
ಮೃತರು ಇದ್ದ ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya
error: Content is protected !!