25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

ಬೆಳ್ತಂಗಡಿ: ಚಿಕ್ಕಮಗಳೂರು ಜಿಲ್ಲಾ ಮಲ್ಲೇಗೌಡ ಸರಕಾರಿ ಆಸ್ಪತ್ರೆಯಲ್ಲಿ ಕಣ್ಣಿನ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದ ಡಾ| ರಮೇಶ್ ಅವರು ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಕಣ್ಣಿನ ತಜ್ಞರಾಗಿ ನೇಮಕಗೊಂಡಿದ್ದಾರೆ.


ಇವರು ಮಂಗಳೂರಿನ ಪ್ರತಿಷ್ಠಿತ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಪದವಿಯನ್ನು ಪಡೆದು ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು. ಬಳಿಕ ಪಿ.ಜಿ ಮಾಡಿ ಕಣ್ಣಿನ ತಜ್ಞರಾಗಿ ಉತ್ತರ ಕರ್ನಾಟಕದ ಸಿಂಧನೂರು, ತುಮಕೂರುನಲ್ಲಿ ಕಾರ್ಯನಿರ್ವಹಿಸಿದ್ದರು.

ಬಳಿಕ ಚಿಕ್ಕಮಗಳೂರು ಜಿಲ್ಲೆಯ ಮಲ್ಲೇಗೌಡ ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸುಮಾರು 10 ವರ್ಷಗಳ ಕಾಲ ಹಿರಿಯ ನೇತ್ರ ತಜ್ಞರಾಗಿ ಸೇವೆ ಸಲ್ಲಿಸಿ ಇದೀಗ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ವರ್ಗಾವಣೆಗೊಂಡು ಆಗಮಿಸಿದ್ದಾರೆ.
ಡಾ. ರಮೇಶ್‌ರವರು ತನ್ನ ಪ್ರೌಢ ಶಿಕ್ಷಣವನ್ನು ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ, ಪಿಯುಸಿಯನ್ನು ಎಸ್.ಡಿ.ಎಂ ಉಜಿರೆಯಲ್ಲಿ ಪೂರೈಸಿದ್ದರು. ಇವರು ಬೆಳ್ತಂಗಡಿ ಕಸಬಾ ಗ್ರಾಮದ ಕಾರಂತ್ಯಾರು ದಿ| ಅಣ್ಣಪ್ಪ ಕುಲಾಲ್‌ರವರ ಪುತ್ರ.

ಇವರ ಧರ್ಮಪತ್ನಿ ಡಾ| ಹೇಮಲತಾ ಅವರು ಕೂಡಾ ಹಿರಿಯ ದಂತ ವೈದ್ಯೆಯಾಗಿ ಇದೇ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ. ಪ್ರಾ. ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya
error: Content is protected !!