September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

ಬೆಳ್ತಂಗಡಿ: ಚಿಕ್ಕಮಗಳೂರು ಜಿಲ್ಲಾ ಮಲ್ಲೇಗೌಡ ಸರಕಾರಿ ಆಸ್ಪತ್ರೆಯಲ್ಲಿ ಕಣ್ಣಿನ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದ ಡಾ| ರಮೇಶ್ ಅವರು ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆಯ ಕಣ್ಣಿನ ತಜ್ಞರಾಗಿ ನೇಮಕಗೊಂಡಿದ್ದಾರೆ.


ಇವರು ಮಂಗಳೂರಿನ ಪ್ರತಿಷ್ಠಿತ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ಎಂ.ಬಿ.ಬಿ.ಎಸ್ ಪದವಿಯನ್ನು ಪಡೆದು ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು. ಬಳಿಕ ಪಿ.ಜಿ ಮಾಡಿ ಕಣ್ಣಿನ ತಜ್ಞರಾಗಿ ಉತ್ತರ ಕರ್ನಾಟಕದ ಸಿಂಧನೂರು, ತುಮಕೂರುನಲ್ಲಿ ಕಾರ್ಯನಿರ್ವಹಿಸಿದ್ದರು.

ಬಳಿಕ ಚಿಕ್ಕಮಗಳೂರು ಜಿಲ್ಲೆಯ ಮಲ್ಲೇಗೌಡ ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸುಮಾರು 10 ವರ್ಷಗಳ ಕಾಲ ಹಿರಿಯ ನೇತ್ರ ತಜ್ಞರಾಗಿ ಸೇವೆ ಸಲ್ಲಿಸಿ ಇದೀಗ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ವರ್ಗಾವಣೆಗೊಂಡು ಆಗಮಿಸಿದ್ದಾರೆ.
ಡಾ. ರಮೇಶ್‌ರವರು ತನ್ನ ಪ್ರೌಢ ಶಿಕ್ಷಣವನ್ನು ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ, ಪಿಯುಸಿಯನ್ನು ಎಸ್.ಡಿ.ಎಂ ಉಜಿರೆಯಲ್ಲಿ ಪೂರೈಸಿದ್ದರು. ಇವರು ಬೆಳ್ತಂಗಡಿ ಕಸಬಾ ಗ್ರಾಮದ ಕಾರಂತ್ಯಾರು ದಿ| ಅಣ್ಣಪ್ಪ ಕುಲಾಲ್‌ರವರ ಪುತ್ರ.

ಇವರ ಧರ್ಮಪತ್ನಿ ಡಾ| ಹೇಮಲತಾ ಅವರು ಕೂಡಾ ಹಿರಿಯ ದಂತ ವೈದ್ಯೆಯಾಗಿ ಇದೇ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಬೆಳ್ತಂಗಡಿ–ಗುರುವಾಯನಕೆರೆ ಭಜನಾ ಪರಿಷತ್ತಿನ ಸಭೆ

Suddi Udaya

ಮಡಂತ್ಯಾರು: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

Suddi Udaya

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya
error: Content is protected !!