ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮವನ್ನು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ರವರು ಚೆನ್ನೆಮಣೆ ಆಡುವ ಮೂಲಕ ಉದ್ಘಾಟಿಸಿದರು. ಹಾಗೂ ಖಾದ್ಯಗಳ ಉದ್ಘಾಟನೆಯನ್ನು ಮಹಾಪೋಷಕರರಾದ ಲೋಕೇಶ್ವರಿ ವಿನಯಚಂದ್ರ ನೆರವೇರಿಸಿದರು.

ಸವಿತಾ ಜಯದೇವ್ ಅಧ್ಯಕ್ಷತೆಯನ್ನು ವಹಿಸಿದರು.

ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ವಿದ್ಯಾಶ್ರೀನಿವಾಸ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಸದಸ್ಯರು ಹಾಗೂ ಸಾಂತ್ವನ ಕೇಂದ್ರದ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ಜತೆ ಕಾರ್ಯದರ್ಶಿ ವಿನೋದಿನಿ ರಾಮಪ್ಪ ಪ್ರಾರ್ಥಿಸಿ, ಗೌರವಾಧ್ಯಕ್ಷೆ ಶಾಂತಾ ಬಂಗೇರ ಸ್ವಾಗತಿಸಿದರು. ಕೋಶಾಧಿಕಾರಿ ಉಷಾ ಲಕ್ಷ್ಮಣ ಗೌಡ ನಿರೂಪಿಸಿದರು. ಕಾರ್‍ಯದರ್ಶಿ ಆಶಾ ಸತೀಶ್ ಧನ್ಯವಾದವಿತ್ತರು.

Leave a Comment

error: Content is protected !!