July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿದ ಕೂಟ ಎನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ದೈವ ನರ್ತಕ ಸಿವಿಲ್ ಇಂಜಿನಿಯರ್ ಉಪನ್ಯಾಸಕ ಡಾ.ರವೀಶ್ ಪಡುಮಲೆ ಕಾರ್ಯಕ್ರಮ ಉದ್ಘಾಟಿಸಿ ವಿಶೇಷ ಉಪನ್ಯಾಸವನ್ನು ನೀಡಿದರು.

ನಮ್ಮ ಹಿರಿಯರು ಹಿಂದಿನ ಕಾಲದಲ್ಲಿ ಬಹಳಷ್ಟು ಕಷ್ಟದ ಬದುಕನ್ನ ನಡೆಸುತ್ತಿದ್ದರು, ಆಟಿ ಎಂಬುದು ತುಳುನಾಡಿನ ತುಳುವರ ಒಂದು ವಿಶೇಷ ತಿಂಗಳಾಗಿದ್ದು ನಮ್ಮ ಹಿರಿಯರ ಅಂದಿನ ಬದುಕನ್ನು ಇಂದು ನಾವೆಲ್ಲರೂ ಆಟಿ ತಿಂಗಳಲ್ಲಿ ವಿವಿಧ ಕಾರ್ಯಕ್ರಮಗಳ ಜೋಡಣೆಯೊಂದಿಗೆ ನೆನಪು ಮಾಡಿಕೊಳ್ಳುತ್ತಿದ್ದೇವೆ. ಹಿರಿಯರು ತೋರಿಸಿದ ದಾರಿಯಲ್ಲಿ ಮುನ್ನಡೆದರೆ ನಮ್ಮ ಜೀವನದಲ್ಲಿ ಯಶಸ್ಸು ಗಳಿಸುತ್ತೇವೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ತಮ್ಮ ಮನೆಯಿಂದ ತಂದ ವಿವಿಧ ಹಳೆಯ ವಸ್ತುಗಳನ್ನು ಮತ್ತು ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅತ್ಯುತ್ತಮ ಸಾಧನೆ-ಪ್ರಸಕ್ತ ಸಾಲಿನಲ್ಲಿ ರೂ 326 ಕೋಟಿ ಠೇವಣಿ,ರೂ.269 ಕೋಟಿ ಸಾಲ,ರೂ.70 ಕೋಟಿ ಹೂಡಿಕೆ,ರೂ.5.85 ಕೋಟಿ ಲಾಭ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!