ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘವು 2022-23 ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಸಾಧನೆಗೈದು ಹಾಲು ಉತ್ಪಾದಕರ ವ್ಯವಹಾರದಲ್ಲಿ ಸಹಕಾರ ಸಂಘಗಳನ್ನು ಗುರುತಿಸುವ ನಿಟ್ಟಿನಲ್ಲಿ ಸಾಧಿಸಿರುವ ಸಾಧನೆಗಾಗಿ ಸಾಧನಾ ಪ್ರಶಸ್ತಿಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ವಿನಯಚಂದ್ರ ಗೌಡ ಹಾಗೂ ಕಾರ್ಯನಿರ್ವಾಹಣಾಧಿಕಾರಿ ಮೋನಪ್ಪ ಗೌಡ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರು, ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

Leave a Comment

error: Content is protected !!