September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿ ಸದ್ಭಾವನಾ ದಿನದ ಮಹತ್ವ ತಿಳಿಸಿದರು. ಹಾಗೆಯೇ ಸದ್ಭಾವನಾ ಪ್ರತಿಜ್ಞೆಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ವಿವಿಧ ಧರ್ಮಗಳಲ್ಲಿ ಸಾಮರಸ್ಯದ ಬಗ್ಗೆ ವಿದ್ಯಾರ್ಥಿಗಳಿಂದ ಗೋಷ್ಠಿ ನಡೆಯಿತು. ಹಿಂದೂ ಧರ್ಮದ ಬಗ್ಗೆ ಆದಿತ್ಯ ಹೆಗಡೆ , ಇಸ್ಲಾಂ ಧರ್ಮದ ಬಗ್ಗೆ ಮುಹಮ್ಮದ್ ಸಲೀಲ್ , ಜೈನ ಧರ್ಮದ ಬಗ್ಗೆ ಚಾರಿತ್ರ್ಯ ಜೈನ್ ಹಾಗೂ ಕ್ರಿಶ್ಚಿಯನ್ ಧರ್ಮದ ಬಗ್ಗೆ ಪ್ರೀತಮ್ ಮಿನೇಜಸ್ ಇವರು ಸಾಮರಸ್ಯದ ಬಗ್ಗೆ ಮಾತನಾಡಿದರು.

ರಾ.ಸೇ.ಯೋಜನೆಯ ನಾಯಕಿ ದಕ್ಷಾ ಸ್ವಾಗತಿಸಿ , ಅಕ್ಷತಾ ಎಂ.ಜಿ ವಂದಿಸಿದರು. ಡಯಾನಾ ನಿರೂಪಿಸಿದರು.

Related posts

ಬದ್ರಿಯಾ ಜುಮ್ಮಾ ಮಸ್ಜಿದ್ ಉಜಿರೆ ಟೌನ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

Suddi Udaya
error: Content is protected !!