July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

ಬೆಳ್ತಂಗಡಿ : ತಾಲೂಕಿನ ಗುರುವಾಯನಕೆರೆಯ ಯಡೂ೯ರು ನಿವಾಸಿಯಾಗಿರುವ ಈಗ ಇಂಗ್ಲೆಡ್ ನಲ್ಲಿ ಉದ್ಯೋಗದಲ್ಲಿರುವ ಕುಮಾರ್ ಮತ್ತು ಮಾನಸ ದಂಪತಿಯ ಪುತ್ರ ಕನಿಷ್ಕ್ ರಾವ್ ಈ ಬಾರಿ ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ರೇಸ್ ನ ನಾಲ್ಕನೇ ರೌಂಡ್ ನಲ್ಲಿ ಗೆದ್ದು ಬೀಗಿದ್ದಾರೆ. ಆಗಸ್ಟ್ 20ರಂದು ಲಂಡನ್ ನಲ್ಲಿ ನಡೆದ ಸ್ಪರ್ಧೆಯಲ್ಲಿ ಕನಿಷ್ ಮಿಂಚಿನ ವೇಗದಲ್ಲಿ ಚಲಿಸಿ ವಿಜೇತರಾಗಿದ್ದಾರೆ. ಕನಿಷ್ಠ ನಿನ್ನೆ Scotland ನಲ್ಲಿ ನಡೆದ British national championship ಅಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. Qualifying race ಅಲ್ಲಿ 6ನೇ ಸ್ಥಾನ ಪಡೆದು, heats ಅಲ್ಲಿ 5ನೇ ಸ್ಥಾನ ಪಡೆದಿರುತ್ತಾರೆ. ನಂತರ prefinal ರೇಸ್ ಅಲ್ಲಿ 2nd finish ಮಾಡಿ, ಫೈನಲ್ ನಲ್ಲಿ first position ಅಲ್ಲಿ win ಆಗಿದ್ದಾರೆ ಎಂದು ಅವರ ತಂದೆ ಕುಮಾರ್ ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

12 ವರ್ಷದ ಬಾಲಕ ಕನಿಷ್ಠ ರಾವ್ ಫಾರ್ಮಲಾ 1ಚಾಂಪಿಯನ್ ಆಗಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಕಾರ್ ರೇಸಿಂಗ್ ನಲ್ಲಿ ಭಾಗಿಯಾಗುತ್ತಿರುವ ಕನಿಷ್ಠ ಏಳು ತಿಂಗಳ ಹಿಂದೆ ಕನಿಷ್ಕ ತನ್ನ ತವರೂರು ಗುರುವಾಯನಕೆರೆ ಯಡೂ೯ರಿನ ಮನೆಗೆ ಬಂದು ಹೋಗಿದ್ದರು. ತುಳುವಿನಲ್ಲಿ ನಿಗ೯ಳವಾಗಿ ಮಾತನಾಡುವ ಕನಿಷ್ಠ ಕಳೆದ ಬಾರಿ ಊರಿಗೆ ಬಂದಾಗ ತನ್ನ ಫೆವರಿಟ್ ಫುಡ್, ಆಸಕ್ತಿ , ಹವ್ಯಾಸ ಗಳ ಬಗ್ಗೆ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದರು.

ತಾಲೂಕಿನ ಪ್ರತಿಭಾನ್ವಿತ ಬಾಲಕ, ಫಾರ್ಮುಲಾ ವನ್ ರೇಸ್ ನಲ್ಲಿ ಸಾಧನೆ ಮಾಡುವ ಭರವಸೆ ಹೊಂದಿದ್ದು, ಇವರಿಗೆ ” ಸುದ್ದಿ ಉದಯ ಬಳಗ” ಶುಭ ಹಾರೈಸುತ್ತದೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya

ಗುರುವಾಯನಕೆರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ ಅಲ್ಫೋನ್ಸ್ ಫ್ರಾಂಕೋ

Suddi Udaya

ವೇಣೂರು ಗ್ರಾ.ಪಂ. ಹಾಗೂ ಮೂಡುಕೋಡಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya
error: Content is protected !!