25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ವತಿಯಿಂದ ಗೀತಾ ಗಾಯನ ಸ್ಪರ್ಧೆ ಮತ್ತು ಷಡ್ಕನಾಯಕರ ತರಬೇತಿಯ ಉದ್ಘಾಟನಾ ಸಮಾರಂಭ ಆ. 23 ರಂದು ನಡೆಯಿತು.

ಉದ್ಘಾಟನೆಯನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ನೆರವೇರಿಸಿದರು. ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಹಾಜಿ ಅಬ್ದುಲ್ ಸಾಹೇಬ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾ ಪಂ ಸದಸ್ಯರುಗಳಾದ ಸುಮಂಗಲ ಪ್ರಭು, ಸಿಲ್ಬಸ್ಟರ್ ಮೋನಿಸ್ , ಅಮೀನ, ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ, ಉದ್ಯಮಿ ಉಮರಬ್ಬ ಮದ್ದಡ್ಕ, ಗೋವಿಂದ ಭಟ್, ಹಿರಿಯ ವಿದ್ಯಾರ್ಥಿ ಧನಂಜಯ ಆಲಂದಿಲ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಫಿಲೋಮಿನಾ ಲೋಬೊ, ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಇದರ ಕಾರ್ಯದರ್ಶಿ ಶಾಂತರಾಮ ಪ್ರಭು, ಕೋಶಾಧಿಕಾರಿ ಸುಜಾತ ಉಪಸ್ಥಿತರಿದ್ದರು.

ಗೈಡ್ ಕ್ಯಾಪ್ಟನ್ ಪೂರ್ಣಿಮಾ ಸ್ವಾಗತಿಸಿ, ಕೋಶಾಧಿಕಾರಿ ಸುಜಾತ ಧನ್ಯವಾದ ನೀಡಿದರು. ಪುಂಜಾಲಕಟ್ಟೆ ಸ್ಕೌಟ್ ಮಾಸ್ಟರ್ ಧರಣೇಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya
error: Content is protected !!