24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ವತಿಯಿಂದ ಗೀತಾ ಗಾಯನ ಸ್ಪರ್ಧೆ ಮತ್ತು ಷಡ್ಕನಾಯಕರ ತರಬೇತಿಯ ಉದ್ಘಾಟನಾ ಸಮಾರಂಭ ಆ. 23 ರಂದು ನಡೆಯಿತು.

ಉದ್ಘಾಟನೆಯನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ನೆರವೇರಿಸಿದರು. ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಹಾಜಿ ಅಬ್ದುಲ್ ಸಾಹೇಬ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾ ಪಂ ಸದಸ್ಯರುಗಳಾದ ಸುಮಂಗಲ ಪ್ರಭು, ಸಿಲ್ಬಸ್ಟರ್ ಮೋನಿಸ್ , ಅಮೀನ, ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ, ಉದ್ಯಮಿ ಉಮರಬ್ಬ ಮದ್ದಡ್ಕ, ಗೋವಿಂದ ಭಟ್, ಹಿರಿಯ ವಿದ್ಯಾರ್ಥಿ ಧನಂಜಯ ಆಲಂದಿಲ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಫಿಲೋಮಿನಾ ಲೋಬೊ, ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಇದರ ಕಾರ್ಯದರ್ಶಿ ಶಾಂತರಾಮ ಪ್ರಭು, ಕೋಶಾಧಿಕಾರಿ ಸುಜಾತ ಉಪಸ್ಥಿತರಿದ್ದರು.

ಗೈಡ್ ಕ್ಯಾಪ್ಟನ್ ಪೂರ್ಣಿಮಾ ಸ್ವಾಗತಿಸಿ, ಕೋಶಾಧಿಕಾರಿ ಸುಜಾತ ಧನ್ಯವಾದ ನೀಡಿದರು. ಪುಂಜಾಲಕಟ್ಟೆ ಸ್ಕೌಟ್ ಮಾಸ್ಟರ್ ಧರಣೇಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಪ್ರಸನ್ನ ಪಿ ಯು ಕಾಲೇಜಿನ ವಿದ್ಯಾರ್ಥಿ ಚಂದನ್ ಬಿ.ಯು. ಬೆಳ್ಳಿ ಪದಕ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಸರಕಾರದಿಂದ ಮಂಜೂರುಗೊಂಡಿರುವ ಜಾಗವನ್ನು ಸವೆ೯ ನಡೆಸಲು ನಾಗರಿಕರ ಆಕ್ಷೇಪಣೆ: ಶಿಶಿಲ ಗ್ರಾಮಸ್ಥರಿಂದ ಉಪ್ಪಿನಂಗಡಿ ಉಪ ವಲಯಾಣ್ಯಾಧಿಕಾರಿಗೆ ಮನವಿ

Suddi Udaya
error: Content is protected !!