ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಬೆಳ್ತಂಗಡಿ: ಪಟ್ರಮೆ ಗ್ರಾಮದ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಬೇಟೆ ಮಾಡಿದ ಮೂವರನ್ನು ಕೊವಿ ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ ಘಟನೆ ಆ.23ರಂದು ವರದಿಯಾಗಿದೆ.

ಉಪ್ಪಿನಂಗಡಿ ಅರಣ್ಯ ಇಲಾಖೆ ವ್ಯಾಪ್ತಿಯಲ ದಡಂತಮಲೆ ಬಟ್ಟಾಡಿ ಕಪಿಲ ನದಿ‌ ಪಕ್ಕದಲ್ಲಿ ನಾಲ್ಕು ವರ್ಷ ಪ್ರಾಯದ ಕಡವೆಯನ್ನು ಆರೋಪಿಗಳು ನಿನ್ನೆ ರಾತ್ರಿ ಭೇಟೆಯಾಡಿದರೆನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸುದೇಶ್ ಪಟ್ರಮೆ, ಪುಣಿತ್, ಕೊಟ್ಯಾಪ್ಪ ಗೌಡ ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ಕೊಂಡಿದ್ದಾರೆ. ಈ ಸಂದರ್ಭದಲ್ಲಿ ಲೋಕೇಶ್ ಎಂಬವರು ತಲೆಮರೆಸಿಕೊಂಡಿದ್ದಾರೆ. ಉಪ್ಪಿನಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

error: Content is protected !!