April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

ಉಜಿರೆ: ಮನಸ್ಸಿನ ಉಲ್ಲಾಸಕ್ಕಾಗಿ ಕ್ರೀಡೆ ಸಹಕಾರಿ, ದಿನದೆ ಒಂದು ಗಂಟೆ ಆಟ ಎಲ್ಲಾ ತರಹದ ಜಡತ್ವವನ್ನು ಹೋಗಲಾಡಿಸುತ್ತದೆ. ಶಿಕ್ಷಣದಲ್ಲಿ ದೈಹಿಕ ಶಿಕ್ಷಣವು ಅದರ ಅವಿಭಾಜ್ಯ ಅಂಗ. ಕ್ರೀಡಾ ಸ್ಪೂರ್ತಿಯನ್ನು ಮೈಗೂಡಿಸಿಕೊಂಡಾಗ ಕಲಿಕೆಯು ಸರಾಗವಾಗಿ ಸಾಗುತ್ತದೆ.” ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಬಿ ಸೋಮಶೇಖರ ಶೆಟ್ಟಿ ಹೇಳಿದರು.


ಅವರು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮುಖ್ಯ ಅತಿಥಿ ಸ್ಥಾನದಲ್ಲಿ ಮಾತನಾಡುತ್ತಿದ್ದರು.


ಕಾರ್ಯಕ್ರಮವನ್ನು ಉದ್ಘಾಟಿಸಿದ ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ “ಕ್ರೀಡೆ ಮನಸ್ಸನ್ನು ಉಲ್ಲಾಸದಲ್ಲಿರಿಸಿ ಪ್ರೇರಣೆಗೆ ಕಾರಣವಾಗುತ್ತದೆ” ಎಂದು ಹೇಳಿದರು.


ಬೆಳ್ತಂಗಡಿ ದೈಹಿಕ ಶಿಕ್ಷಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯ ಶುಭ ಹಾರೈಸಿದರು.
ವೇದಿಕೆಯಲ್ಲಿ ದಕ್ಷಿಣಕನ್ನಡ ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಾನಂದ, ಕರ್ನಾಟಕ ರಾಜ್ಯ ನೌಕರರ ಸಂಘದ ಬೆಳ್ತಂಗಡಿ ಘಟಕದ ಅಧ್ಯಕ್ಷ ಜಯರಾಜ್ ಜೈನ್, ಎಸ್ ಡಿ ಎಂ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಮೇಶ್ ಉಪಸ್ಥಿತರಿದ್ದು, ಶುಭ ಕೋರಿದರು.


ಶಾಲಾ ಮುಖ್ಯ ಶಿಕ್ಷಕ ಪದ್ಮರಾಜ್ ಎನ್ ಸ್ವಾಗತಿಸಿ, ಶಿಕ್ಷಕ ಜಯರಾಮ ಮಯ್ಯ ವಂದಿಸಿದ ಈ ಕಾರ್ಯಕ್ರಮವನ್ನು ಶಿಕ್ಷಕ ಯುವರಾಜ್ ನಿರೂಪಿಸಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸದಾನಂದ ಸಂಘಟಿಸಿದ್ದರು.

Related posts

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಉಜಿರೆಯಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

Suddi Udaya

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya

ತೆಕ್ಕಾರು : ಬಾಜಾರು ಕುಟ್ಟಿಕಲ ಜಿ.ಪಂ. ಹಿ.ಪ್ರಾ. ಶಾಲೆಯು ದುರಸ್ತಿಯಾಗದೆ ನೀರು ಸೋರಿಕೆ: ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಗಮನ ಹರಿಸುವಂತೆ ಸೂಚನೆ

Suddi Udaya
error: Content is protected !!