32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿದ ಕೂಟ ಎನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ದೈವ ನರ್ತಕ ಸಿವಿಲ್ ಇಂಜಿನಿಯರ್ ಉಪನ್ಯಾಸಕ ಡಾ.ರವೀಶ್ ಪಡುಮಲೆ ಕಾರ್ಯಕ್ರಮ ಉದ್ಘಾಟಿಸಿ ವಿಶೇಷ ಉಪನ್ಯಾಸವನ್ನು ನೀಡಿದರು.

ನಮ್ಮ ಹಿರಿಯರು ಹಿಂದಿನ ಕಾಲದಲ್ಲಿ ಬಹಳಷ್ಟು ಕಷ್ಟದ ಬದುಕನ್ನ ನಡೆಸುತ್ತಿದ್ದರು, ಆಟಿ ಎಂಬುದು ತುಳುನಾಡಿನ ತುಳುವರ ಒಂದು ವಿಶೇಷ ತಿಂಗಳಾಗಿದ್ದು ನಮ್ಮ ಹಿರಿಯರ ಅಂದಿನ ಬದುಕನ್ನು ಇಂದು ನಾವೆಲ್ಲರೂ ಆಟಿ ತಿಂಗಳಲ್ಲಿ ವಿವಿಧ ಕಾರ್ಯಕ್ರಮಗಳ ಜೋಡಣೆಯೊಂದಿಗೆ ನೆನಪು ಮಾಡಿಕೊಳ್ಳುತ್ತಿದ್ದೇವೆ. ಹಿರಿಯರು ತೋರಿಸಿದ ದಾರಿಯಲ್ಲಿ ಮುನ್ನಡೆದರೆ ನಮ್ಮ ಜೀವನದಲ್ಲಿ ಯಶಸ್ಸು ಗಳಿಸುತ್ತೇವೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ತಮ್ಮ ಮನೆಯಿಂದ ತಂದ ವಿವಿಧ ಹಳೆಯ ವಸ್ತುಗಳನ್ನು ಮತ್ತು ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya
error: Content is protected !!