23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿದ ಕೂಟ ಎನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ದೈವ ನರ್ತಕ ಸಿವಿಲ್ ಇಂಜಿನಿಯರ್ ಉಪನ್ಯಾಸಕ ಡಾ.ರವೀಶ್ ಪಡುಮಲೆ ಕಾರ್ಯಕ್ರಮ ಉದ್ಘಾಟಿಸಿ ವಿಶೇಷ ಉಪನ್ಯಾಸವನ್ನು ನೀಡಿದರು.

ನಮ್ಮ ಹಿರಿಯರು ಹಿಂದಿನ ಕಾಲದಲ್ಲಿ ಬಹಳಷ್ಟು ಕಷ್ಟದ ಬದುಕನ್ನ ನಡೆಸುತ್ತಿದ್ದರು, ಆಟಿ ಎಂಬುದು ತುಳುನಾಡಿನ ತುಳುವರ ಒಂದು ವಿಶೇಷ ತಿಂಗಳಾಗಿದ್ದು ನಮ್ಮ ಹಿರಿಯರ ಅಂದಿನ ಬದುಕನ್ನು ಇಂದು ನಾವೆಲ್ಲರೂ ಆಟಿ ತಿಂಗಳಲ್ಲಿ ವಿವಿಧ ಕಾರ್ಯಕ್ರಮಗಳ ಜೋಡಣೆಯೊಂದಿಗೆ ನೆನಪು ಮಾಡಿಕೊಳ್ಳುತ್ತಿದ್ದೇವೆ. ಹಿರಿಯರು ತೋರಿಸಿದ ದಾರಿಯಲ್ಲಿ ಮುನ್ನಡೆದರೆ ನಮ್ಮ ಜೀವನದಲ್ಲಿ ಯಶಸ್ಸು ಗಳಿಸುತ್ತೇವೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ತಮ್ಮ ಮನೆಯಿಂದ ತಂದ ವಿವಿಧ ಹಳೆಯ ವಸ್ತುಗಳನ್ನು ಮತ್ತು ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಉಜಿರೆ: ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ಅಪಘಾತ: ಬೈಕ್ ಸವಾರ ಗಂಭೀರ

Suddi Udaya

ಬೆಳ್ತಂಗಡಿ ಯೋಜನೆಯ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಡಾ. ಎಂ ಮೋಹನ ಆಳ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!