23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

ಬೆಳ್ತಂಗಡಿ : ತಾಲೂಕಿನ ಗುರುವಾಯನಕೆರೆಯ ಯಡೂ೯ರು ನಿವಾಸಿಯಾಗಿರುವ ಈಗ ಇಂಗ್ಲೆಡ್ ನಲ್ಲಿ ಉದ್ಯೋಗದಲ್ಲಿರುವ ಕುಮಾರ್ ಮತ್ತು ಮಾನಸ ದಂಪತಿಯ ಪುತ್ರ ಕನಿಷ್ಕ್ ರಾವ್ ಈ ಬಾರಿ ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ರೇಸ್ ನ ನಾಲ್ಕನೇ ರೌಂಡ್ ನಲ್ಲಿ ಗೆದ್ದು ಬೀಗಿದ್ದಾರೆ. ಆಗಸ್ಟ್ 20ರಂದು ಲಂಡನ್ ನಲ್ಲಿ ನಡೆದ ಸ್ಪರ್ಧೆಯಲ್ಲಿ ಕನಿಷ್ ಮಿಂಚಿನ ವೇಗದಲ್ಲಿ ಚಲಿಸಿ ವಿಜೇತರಾಗಿದ್ದಾರೆ. ಕನಿಷ್ಠ ನಿನ್ನೆ Scotland ನಲ್ಲಿ ನಡೆದ British national championship ಅಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. Qualifying race ಅಲ್ಲಿ 6ನೇ ಸ್ಥಾನ ಪಡೆದು, heats ಅಲ್ಲಿ 5ನೇ ಸ್ಥಾನ ಪಡೆದಿರುತ್ತಾರೆ. ನಂತರ prefinal ರೇಸ್ ಅಲ್ಲಿ 2nd finish ಮಾಡಿ, ಫೈನಲ್ ನಲ್ಲಿ first position ಅಲ್ಲಿ win ಆಗಿದ್ದಾರೆ ಎಂದು ಅವರ ತಂದೆ ಕುಮಾರ್ ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

12 ವರ್ಷದ ಬಾಲಕ ಕನಿಷ್ಠ ರಾವ್ ಫಾರ್ಮಲಾ 1ಚಾಂಪಿಯನ್ ಆಗಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಕಾರ್ ರೇಸಿಂಗ್ ನಲ್ಲಿ ಭಾಗಿಯಾಗುತ್ತಿರುವ ಕನಿಷ್ಠ ಏಳು ತಿಂಗಳ ಹಿಂದೆ ಕನಿಷ್ಕ ತನ್ನ ತವರೂರು ಗುರುವಾಯನಕೆರೆ ಯಡೂ೯ರಿನ ಮನೆಗೆ ಬಂದು ಹೋಗಿದ್ದರು. ತುಳುವಿನಲ್ಲಿ ನಿಗ೯ಳವಾಗಿ ಮಾತನಾಡುವ ಕನಿಷ್ಠ ಕಳೆದ ಬಾರಿ ಊರಿಗೆ ಬಂದಾಗ ತನ್ನ ಫೆವರಿಟ್ ಫುಡ್, ಆಸಕ್ತಿ , ಹವ್ಯಾಸ ಗಳ ಬಗ್ಗೆ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದರು.

ತಾಲೂಕಿನ ಪ್ರತಿಭಾನ್ವಿತ ಬಾಲಕ, ಫಾರ್ಮುಲಾ ವನ್ ರೇಸ್ ನಲ್ಲಿ ಸಾಧನೆ ಮಾಡುವ ಭರವಸೆ ಹೊಂದಿದ್ದು, ಇವರಿಗೆ ” ಸುದ್ದಿ ಉದಯ ಬಳಗ” ಶುಭ ಹಾರೈಸುತ್ತದೆ.

Related posts

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya
error: Content is protected !!