July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ಚಂದ್ರಯಾನ-3 ತನ್ನ ಗುರಿಯನ್ನು ತಲುಪಿ ಯಶಸ್ವಿಯಾಗಿದ್ದು, ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ. ಇದನ್ನು ಸಾಧಿಸಿದ ಇಸ್ರೋ ವಿಜ್ಞಾನಿಗಳಿಗೆ ಹಾಗೂ ಇದರ ಹಿಂದಿರುವ ಪ್ರೇರಕ ಶಕ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ.

ಅವರು ನೀಡಿದ ಪತ್ರಿಕಾ ಹೇಳಿಕೆಯಲ್ಲಿ, ಚಂದ್ರನ ಮೇಲೆ ಭಾರತ ಸಾಧಿಸಿರುವ ವಿಕ್ರಮ ಮುಂದಿನ ದಿನಗಳಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ನವ ಮನ್ವಂತರಕ್ಕೆ ದಾರಿಯಾಗಲಿದೆ. ನಮ್ಮೆಲ್ಲರ ಕಾತರದ ಕ್ಷಣಗಳಿಗೆ ಆನಂದದ ಸ್ಪರ್ಶವಾಗಿದೆ. ಇಂದು ನಾವು ಮಾತ್ರವಲ್ಲದೆ ಸಂಪೂರ್ಣ ವಿಶ್ವವೇ ಆನಂದಪಟ್ಟಿದೆ. ಈಗಾಗಲೇ ವಿಶ್ವದಲ್ಲಿ ಭಾರತ ಅಗ್ರಗಣ್ಯ ಸ್ಥಾನಕ್ಕೆ ಹೋಗುತ್ತಿದ್ದು ಅದಕ್ಕೆ ಇಂದಿನ ಸಾಧನೆಯು ಮತ್ತಷ್ಟು ಪುಷ್ಟಿಯನ್ನು ನೀಡಲಿದೆ ಎಂದು ಹೇಳಿಕೆಯಲ್ಲಿ ಶ್ಲಾಘಿಸಿದ್ದಾರೆ.

Related posts

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya
error: Content is protected !!