23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ಚಂದ್ರಯಾನ-3 ತನ್ನ ಗುರಿಯನ್ನು ತಲುಪಿ ಯಶಸ್ವಿಯಾಗಿದ್ದು, ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ. ಇದನ್ನು ಸಾಧಿಸಿದ ಇಸ್ರೋ ವಿಜ್ಞಾನಿಗಳಿಗೆ ಹಾಗೂ ಇದರ ಹಿಂದಿರುವ ಪ್ರೇರಕ ಶಕ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ.

ಅವರು ನೀಡಿದ ಪತ್ರಿಕಾ ಹೇಳಿಕೆಯಲ್ಲಿ, ಚಂದ್ರನ ಮೇಲೆ ಭಾರತ ಸಾಧಿಸಿರುವ ವಿಕ್ರಮ ಮುಂದಿನ ದಿನಗಳಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ನವ ಮನ್ವಂತರಕ್ಕೆ ದಾರಿಯಾಗಲಿದೆ. ನಮ್ಮೆಲ್ಲರ ಕಾತರದ ಕ್ಷಣಗಳಿಗೆ ಆನಂದದ ಸ್ಪರ್ಶವಾಗಿದೆ. ಇಂದು ನಾವು ಮಾತ್ರವಲ್ಲದೆ ಸಂಪೂರ್ಣ ವಿಶ್ವವೇ ಆನಂದಪಟ್ಟಿದೆ. ಈಗಾಗಲೇ ವಿಶ್ವದಲ್ಲಿ ಭಾರತ ಅಗ್ರಗಣ್ಯ ಸ್ಥಾನಕ್ಕೆ ಹೋಗುತ್ತಿದ್ದು ಅದಕ್ಕೆ ಇಂದಿನ ಸಾಧನೆಯು ಮತ್ತಷ್ಟು ಪುಷ್ಟಿಯನ್ನು ನೀಡಲಿದೆ ಎಂದು ಹೇಳಿಕೆಯಲ್ಲಿ ಶ್ಲಾಘಿಸಿದ್ದಾರೆ.

Related posts

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya
error: Content is protected !!