July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿದ ಕೂಟ ಎನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ದೈವ ನರ್ತಕ ಸಿವಿಲ್ ಇಂಜಿನಿಯರ್ ಉಪನ್ಯಾಸಕ ಡಾ.ರವೀಶ್ ಪಡುಮಲೆ ಕಾರ್ಯಕ್ರಮ ಉದ್ಘಾಟಿಸಿ ವಿಶೇಷ ಉಪನ್ಯಾಸವನ್ನು ನೀಡಿದರು.

ನಮ್ಮ ಹಿರಿಯರು ಹಿಂದಿನ ಕಾಲದಲ್ಲಿ ಬಹಳಷ್ಟು ಕಷ್ಟದ ಬದುಕನ್ನ ನಡೆಸುತ್ತಿದ್ದರು, ಆಟಿ ಎಂಬುದು ತುಳುನಾಡಿನ ತುಳುವರ ಒಂದು ವಿಶೇಷ ತಿಂಗಳಾಗಿದ್ದು ನಮ್ಮ ಹಿರಿಯರ ಅಂದಿನ ಬದುಕನ್ನು ಇಂದು ನಾವೆಲ್ಲರೂ ಆಟಿ ತಿಂಗಳಲ್ಲಿ ವಿವಿಧ ಕಾರ್ಯಕ್ರಮಗಳ ಜೋಡಣೆಯೊಂದಿಗೆ ನೆನಪು ಮಾಡಿಕೊಳ್ಳುತ್ತಿದ್ದೇವೆ. ಹಿರಿಯರು ತೋರಿಸಿದ ದಾರಿಯಲ್ಲಿ ಮುನ್ನಡೆದರೆ ನಮ್ಮ ಜೀವನದಲ್ಲಿ ಯಶಸ್ಸು ಗಳಿಸುತ್ತೇವೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ವಿದ್ಯಾರ್ಥಿಗಳು ತಮ್ಮ ಮನೆಯಿಂದ ತಂದ ವಿವಿಧ ಹಳೆಯ ವಸ್ತುಗಳನ್ನು ಮತ್ತು ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

Suddi Udaya
error: Content is protected !!