23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಚಂದ್ರ‍ಯಾನದ ಸರಣಿಯ ಮೂರನೇ ಯಾನದ ವಿಕ್ರಮ್ ಚಂದ್ರನ ಅಂಗಳಕ್ಕೆ ಇಂದು ಬುಧವಾರ ಕಾಲಿಡುವ ಅಂತಿಮ ರೋಚಕ ಕ್ಷಣಗಳನ್ನು ನಾನು ಕೂಡಾ ಅತ್ಯಂತ ಕುತೂಹಲ ಮತ್ತು ಆಸಕ್ತಿಯಿಂದ ವೀಕ್ಷಿಸಿ ಸಂತಸ ಹಾಗೂ ಅಚ್ಚರಿ ಪಟ್ಟಿದ್ದೇನೆ. ಈ ಅದ್ಭುತ ಯಶಸ್ಸಿಗೆ ಭಗೀರಥ ಪ್ರಯತ್ನ ಮಾಡಿದ ಬಾಹ್ಯಾಕಾಶ ವಿಜ್ಞಾನಿಗಳೆಲ್ಲರನ್ನೂ ನಾನು ಹಾರ್ದಿಕವಾಗಿ ಅಭಿನಂದಿಸುತ್ತೇನೆ. ಇದೊಂದು ವಿಶ್ವದಾಖಲೆಯಾಗಿದ್ದು ಭಾರತದ ಕೀರ್ತಿ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಹೆಚ್ಚಾಗಿದೆ.

ಚಂದ್ರನನ್ನು ಈ ಸಂಭ್ರಮ – ಸಡಗರದ ಸಂದರ್ಭದಲ್ಲಿ ಸ್ಮರಿಸಿ ದೂರದಿಂದಲೇ ಪರಿಚಯವಾದ ಚಂದ್ರನನ್ನು ಅತೀ ಸಮೀಪಕ್ಕೆ ತಂದ ಎಲ್ಲಾ ಬಾಹ್ಯಾಕಾಶ ವಿಜ್ಞಾನಿಗಳನ್ನು ಮತ್ತು ತಂತ್ರಜ್ಞರನ್ನು ನಮ್ಮ ದೇಶದ ಎಲ್ಲಾ ಪ್ರಜೆಗಳ ಪರವಾಗಿ ನಾನು ಹಾರ್ದಿಕವಾಗಿ ಅಭಿನಂದಿಸುತ್ತೇನೆ.

ಎಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸುತ್ತಾ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಮುಂದೆ ಇನ್ನೂ ಹೆಚ್ಚಿನ ಸೇವೆ – ಸಾಧನೆ ಮಾಡಿ ಯಶಸ್ಸನ್ನು ಪಡೆಯುವಂತೆ ಶ್ರೀ ಮಂಜುನಾಥ ಸ್ವಾಮಿ ಹಾಗೂ ಧರ್ಮದೇವತೆಗಳು ಅನುಗ್ರಹಿಸಲಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

Related posts

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ನವಯುಗ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

Suddi Udaya
error: Content is protected !!