25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಚಂದ್ರ‍ಯಾನದ ಸರಣಿಯ ಮೂರನೇ ಯಾನದ ವಿಕ್ರಮ್ ಚಂದ್ರನ ಅಂಗಳಕ್ಕೆ ಇಂದು ಬುಧವಾರ ಕಾಲಿಡುವ ಅಂತಿಮ ರೋಚಕ ಕ್ಷಣಗಳನ್ನು ನಾನು ಕೂಡಾ ಅತ್ಯಂತ ಕುತೂಹಲ ಮತ್ತು ಆಸಕ್ತಿಯಿಂದ ವೀಕ್ಷಿಸಿ ಸಂತಸ ಹಾಗೂ ಅಚ್ಚರಿ ಪಟ್ಟಿದ್ದೇನೆ. ಈ ಅದ್ಭುತ ಯಶಸ್ಸಿಗೆ ಭಗೀರಥ ಪ್ರಯತ್ನ ಮಾಡಿದ ಬಾಹ್ಯಾಕಾಶ ವಿಜ್ಞಾನಿಗಳೆಲ್ಲರನ್ನೂ ನಾನು ಹಾರ್ದಿಕವಾಗಿ ಅಭಿನಂದಿಸುತ್ತೇನೆ. ಇದೊಂದು ವಿಶ್ವದಾಖಲೆಯಾಗಿದ್ದು ಭಾರತದ ಕೀರ್ತಿ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಹೆಚ್ಚಾಗಿದೆ.

ಚಂದ್ರನನ್ನು ಈ ಸಂಭ್ರಮ – ಸಡಗರದ ಸಂದರ್ಭದಲ್ಲಿ ಸ್ಮರಿಸಿ ದೂರದಿಂದಲೇ ಪರಿಚಯವಾದ ಚಂದ್ರನನ್ನು ಅತೀ ಸಮೀಪಕ್ಕೆ ತಂದ ಎಲ್ಲಾ ಬಾಹ್ಯಾಕಾಶ ವಿಜ್ಞಾನಿಗಳನ್ನು ಮತ್ತು ತಂತ್ರಜ್ಞರನ್ನು ನಮ್ಮ ದೇಶದ ಎಲ್ಲಾ ಪ್ರಜೆಗಳ ಪರವಾಗಿ ನಾನು ಹಾರ್ದಿಕವಾಗಿ ಅಭಿನಂದಿಸುತ್ತೇನೆ.

ಎಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸುತ್ತಾ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಮುಂದೆ ಇನ್ನೂ ಹೆಚ್ಚಿನ ಸೇವೆ – ಸಾಧನೆ ಮಾಡಿ ಯಶಸ್ಸನ್ನು ಪಡೆಯುವಂತೆ ಶ್ರೀ ಮಂಜುನಾಥ ಸ್ವಾಮಿ ಹಾಗೂ ಧರ್ಮದೇವತೆಗಳು ಅನುಗ್ರಹಿಸಲಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

Related posts

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಆರ್ ಪಿಎಲ್ ತರಬೇತಿಯ ಕಿಟ್ ಮತ್ತು ಸರ್ಟಿಫಿಕೇಟ್ ವಿತರಣೆ

Suddi Udaya

ಇಂದಬೆಟ್ಟು: ಬರೆಮೇಲು ನಿವಾಸಿ ಯಶೋಧ ಯಾನೆ ಮೋನಮ್ಮ ನಿಧನ

Suddi Udaya

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya
error: Content is protected !!