ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ: ಶ್ರೀಗಂಧ ಕಳವು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಕಳೆದ 27 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.


ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ಕುಂಡಾಪು ಮನೆ, ಪಾವೂರು ನಿವಾಸಿ ಎಸ್.ಎ ಅಶ್ರಪ್ ಬಂಧಿತ ಆರೋಪಿಯಾಗಿದ್ದಾನೆ. ಶ್ರೀಗಂಧ ಕಳವು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಈತ ಬೆಳ್ತಂಗಡಿ ನ್ಯಾಯಾಲಯದಲ್ಲಿ ಜಾಮೀನು ಪಡೆದು ಆನಂತರ ಕಳೆದ 27 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿ
ಕೊಂಡು ತಿರುಗಾಡುತಿದ್ದನೆನ್ನಲಾಗಿದೆ.

ಉಪಾಧೀಕ್ಷಕರು ಬಂಟ್ವಾಳರವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಪ್ರಭಾರ ನಿರೀಕ್ಷಕರಾದ ನಾಗೇಶ್ ಕದ್ರಿ ಹಾಗೂ ಉಪನಿರೀಕ್ಷಕರರಾದ ಧನರಾಜ್ ಟಿ. ಎಂ. ಹಾಗೂ ಚಂದ್ರಶೇಖರ್ ರವರ ನೇತೃತ್ವದಲ್ಲಿ ಹೆಡ್ ಕಾನ್ಸ್ಟೇಬಲ್ ಗಳಾದ ಬೆನ್ನಿಚ್ಚನ್, ಗಂಗಾಧರ್ ಹಾಗೂ ಆಶೋಕ್ ರವರು ಕೇರಳ ಪೊಲೀಸರ ಸಹಕಾರದೊಂದಿಗೆ ಕೇರಳದಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈತನ ವಿರುದ್ಧ ಕಾಸರಗೋಡು ಪೊಲೀಸ್ ಠಾಣೆಯಲ್ಲಿ LPC No. 125/2004 ಕಲಂ: 279,304(A)ರಂತೆ ಹಾಗೂ ಉಪ್ಪಿನಂಗಡಿ ಮತ್ತು ಕೋಣಾಜೆ ಪೊಲೀಸ್ ಠಾಣೆಯಲ್ಲಿ ಪಾರೆಸ್ಟ್ ಕಾಯಿದೆಯಡಿ ದಾಖಲಾಗಿರುವ LPC ಪ್ರಕರಣ ವಿಚಾರಣೆಗೆ ಬಾಕಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

error: Content is protected !!