September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

ಬೆಳ್ತಂಗಡಿ: ಶ್ರೀಗಂಧ ಕಳವು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಕಳೆದ 27 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.


ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ಕುಂಡಾಪು ಮನೆ, ಪಾವೂರು ನಿವಾಸಿ ಎಸ್.ಎ ಅಶ್ರಪ್ ಬಂಧಿತ ಆರೋಪಿಯಾಗಿದ್ದಾನೆ. ಶ್ರೀಗಂಧ ಕಳವು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಈತ ಬೆಳ್ತಂಗಡಿ ನ್ಯಾಯಾಲಯದಲ್ಲಿ ಜಾಮೀನು ಪಡೆದು ಆನಂತರ ಕಳೆದ 27 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿ
ಕೊಂಡು ತಿರುಗಾಡುತಿದ್ದನೆನ್ನಲಾಗಿದೆ.

ಉಪಾಧೀಕ್ಷಕರು ಬಂಟ್ವಾಳರವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಪ್ರಭಾರ ನಿರೀಕ್ಷಕರಾದ ನಾಗೇಶ್ ಕದ್ರಿ ಹಾಗೂ ಉಪನಿರೀಕ್ಷಕರರಾದ ಧನರಾಜ್ ಟಿ. ಎಂ. ಹಾಗೂ ಚಂದ್ರಶೇಖರ್ ರವರ ನೇತೃತ್ವದಲ್ಲಿ ಹೆಡ್ ಕಾನ್ಸ್ಟೇಬಲ್ ಗಳಾದ ಬೆನ್ನಿಚ್ಚನ್, ಗಂಗಾಧರ್ ಹಾಗೂ ಆಶೋಕ್ ರವರು ಕೇರಳ ಪೊಲೀಸರ ಸಹಕಾರದೊಂದಿಗೆ ಕೇರಳದಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈತನ ವಿರುದ್ಧ ಕಾಸರಗೋಡು ಪೊಲೀಸ್ ಠಾಣೆಯಲ್ಲಿ LPC No. 125/2004 ಕಲಂ: 279,304(A)ರಂತೆ ಹಾಗೂ ಉಪ್ಪಿನಂಗಡಿ ಮತ್ತು ಕೋಣಾಜೆ ಪೊಲೀಸ್ ಠಾಣೆಯಲ್ಲಿ ಪಾರೆಸ್ಟ್ ಕಾಯಿದೆಯಡಿ ದಾಖಲಾಗಿರುವ LPC ಪ್ರಕರಣ ವಿಚಾರಣೆಗೆ ಬಾಕಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಎಫ್.ಡಿ.ಪಿ ಕಾರ್ಯಾಗಾರದ ಮಾಹಿತಿ ಕೈಪಿಡಿ ಬಿಡುಗಡೆ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya
error: Content is protected !!