22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಚಂದ್ರ‍ಯಾನದ ಸರಣಿಯ ಮೂರನೇ ಯಾನದ ವಿಕ್ರಮ್ ಚಂದ್ರನ ಅಂಗಳಕ್ಕೆ ಇಂದು ಬುಧವಾರ ಕಾಲಿಡುವ ಅಂತಿಮ ರೋಚಕ ಕ್ಷಣಗಳನ್ನು ನಾನು ಕೂಡಾ ಅತ್ಯಂತ ಕುತೂಹಲ ಮತ್ತು ಆಸಕ್ತಿಯಿಂದ ವೀಕ್ಷಿಸಿ ಸಂತಸ ಹಾಗೂ ಅಚ್ಚರಿ ಪಟ್ಟಿದ್ದೇನೆ. ಈ ಅದ್ಭುತ ಯಶಸ್ಸಿಗೆ ಭಗೀರಥ ಪ್ರಯತ್ನ ಮಾಡಿದ ಬಾಹ್ಯಾಕಾಶ ವಿಜ್ಞಾನಿಗಳೆಲ್ಲರನ್ನೂ ನಾನು ಹಾರ್ದಿಕವಾಗಿ ಅಭಿನಂದಿಸುತ್ತೇನೆ. ಇದೊಂದು ವಿಶ್ವದಾಖಲೆಯಾಗಿದ್ದು ಭಾರತದ ಕೀರ್ತಿ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಹೆಚ್ಚಾಗಿದೆ.

ಚಂದ್ರನನ್ನು ಈ ಸಂಭ್ರಮ – ಸಡಗರದ ಸಂದರ್ಭದಲ್ಲಿ ಸ್ಮರಿಸಿ ದೂರದಿಂದಲೇ ಪರಿಚಯವಾದ ಚಂದ್ರನನ್ನು ಅತೀ ಸಮೀಪಕ್ಕೆ ತಂದ ಎಲ್ಲಾ ಬಾಹ್ಯಾಕಾಶ ವಿಜ್ಞಾನಿಗಳನ್ನು ಮತ್ತು ತಂತ್ರಜ್ಞರನ್ನು ನಮ್ಮ ದೇಶದ ಎಲ್ಲಾ ಪ್ರಜೆಗಳ ಪರವಾಗಿ ನಾನು ಹಾರ್ದಿಕವಾಗಿ ಅಭಿನಂದಿಸುತ್ತೇನೆ.

ಎಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸುತ್ತಾ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಮುಂದೆ ಇನ್ನೂ ಹೆಚ್ಚಿನ ಸೇವೆ – ಸಾಧನೆ ಮಾಡಿ ಯಶಸ್ಸನ್ನು ಪಡೆಯುವಂತೆ ಶ್ರೀ ಮಂಜುನಾಥ ಸ್ವಾಮಿ ಹಾಗೂ ಧರ್ಮದೇವತೆಗಳು ಅನುಗ್ರಹಿಸಲಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

Related posts

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

Suddi Udaya

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

ವಿಜಯ ರತ್ನ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಒಲಿದ ವಿದ್ಯಾಸಿರಿ ಗೌರವ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾಳೆ(ನ.22): ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ: ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

Suddi Udaya
error: Content is protected !!