29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

ಬೆಳ್ತಂಗಡಿ: ಶ್ರೀಗಂಧ ಕಳವು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಕಳೆದ 27 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.


ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿ ಗ್ರಾಮದ ಕುಂಡಾಪು ಮನೆ, ಪಾವೂರು ನಿವಾಸಿ ಎಸ್.ಎ ಅಶ್ರಪ್ ಬಂಧಿತ ಆರೋಪಿಯಾಗಿದ್ದಾನೆ. ಶ್ರೀಗಂಧ ಕಳವು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಈತ ಬೆಳ್ತಂಗಡಿ ನ್ಯಾಯಾಲಯದಲ್ಲಿ ಜಾಮೀನು ಪಡೆದು ಆನಂತರ ಕಳೆದ 27 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿ
ಕೊಂಡು ತಿರುಗಾಡುತಿದ್ದನೆನ್ನಲಾಗಿದೆ.

ಉಪಾಧೀಕ್ಷಕರು ಬಂಟ್ವಾಳರವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಪ್ರಭಾರ ನಿರೀಕ್ಷಕರಾದ ನಾಗೇಶ್ ಕದ್ರಿ ಹಾಗೂ ಉಪನಿರೀಕ್ಷಕರರಾದ ಧನರಾಜ್ ಟಿ. ಎಂ. ಹಾಗೂ ಚಂದ್ರಶೇಖರ್ ರವರ ನೇತೃತ್ವದಲ್ಲಿ ಹೆಡ್ ಕಾನ್ಸ್ಟೇಬಲ್ ಗಳಾದ ಬೆನ್ನಿಚ್ಚನ್, ಗಂಗಾಧರ್ ಹಾಗೂ ಆಶೋಕ್ ರವರು ಕೇರಳ ಪೊಲೀಸರ ಸಹಕಾರದೊಂದಿಗೆ ಕೇರಳದಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈತನ ವಿರುದ್ಧ ಕಾಸರಗೋಡು ಪೊಲೀಸ್ ಠಾಣೆಯಲ್ಲಿ LPC No. 125/2004 ಕಲಂ: 279,304(A)ರಂತೆ ಹಾಗೂ ಉಪ್ಪಿನಂಗಡಿ ಮತ್ತು ಕೋಣಾಜೆ ಪೊಲೀಸ್ ಠಾಣೆಯಲ್ಲಿ ಪಾರೆಸ್ಟ್ ಕಾಯಿದೆಯಡಿ ದಾಖಲಾಗಿರುವ LPC ಪ್ರಕರಣ ವಿಚಾರಣೆಗೆ ಬಾಕಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya
error: Content is protected !!