29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

ಬೆಳ್ತಂಗಡಿ : ಕಳೆದ ಕೆಲ ದಿನಗಳಿಂದ ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು ಇದನ್ನು ತಡೆಯಲು ಬೆಳ್ತಂಗಡಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಜಿರೆ ಬ್ಲಾಕ್ ಸಮಿತಿ ಅಧ್ಯಕ್ಷರಾದ ಸಾಹುಲ್ ಉಜಿರೆ ಅಭಿಪ್ರಾಯ ಪಟ್ಟಿದ್ದಾರೆ.

 ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಸುಮಾರು ಹತ್ತು ಕಡೆಗಳಲ್ಲಿ ಒಂದು ತಿಂಗಳ ಅಂತರದಲ್ಲಿ ಕಳ್ಳರು ಎಗ್ಗಿಲ್ಲದೆ ಕಳ್ಳತನ ನಡೆಸುತ್ತಿದ್ದು ಪ್ರಕರಣಗಳನ್ನು ಗಮನಿಸಿದರೆ ಸಹಜವಾಗಿಯೇ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಬಗ್ಗೆ ಬೇಸರ ಮೂಡುತ್ತಿದೆ. ತಾಲೂಕಿನ ಕಕ್ಕಿಂಜೆ, ನೆರಿಯಾ, ಉಜಿರೆ, ಬೆಳ್ತಂಗಡಿ, ಪೇರಲ್ದರ ಕಟ್ಟೆ, ಗುರುವಾಯನಕೆರೆ, ನಾರಾವಿ ಪ್ರದೇಶದಲ್ಲಿ ರಾತ್ರಿ ಹೊತ್ತು ಅಂಗಡಿ ಬೀಗ ಮುರಿದು ಕಳ್ಳರ ತಂಡ ಕಳ್ಳತನ ನಡೆಸುತ್ತಿದ್ದು ಈ ಬಗ್ಗೆ ಸಿಸಿ ಟಿವಿ ದೃಶ್ಯವಳಿ ದೊರೆತಿದ್ದು ಪೊಲೀಸ್ ಇಲಾಖೆ ಕೃತ್ಯದಲ್ಲಿ ಪಾಲ್ಗೊಂಡಿರುವ ಕಳ್ಳರನ್ನು ಆದಷ್ಟು ಬೇಗ ಪತ್ತೆಹಚ್ಚಿ ವ್ಯಾಪಾರಸ್ಥರ ಆತಂಕ ಕಡಿಮೆ ಮಾಡಬೇಕು ಎಂದು ತಿಳಿಸಿದ್ದಾರೆ. 

ಅಂಗಡಿಗಳಲ್ಲಿ ಕಳ್ಳರು ಕಳ್ಳತನ ಮಾಡಿದ್ದರಿಂದ ವ್ಯಾಪಾರಸ್ಥರು ಆರ್ಥಿಕ ನಷ್ಟದೊಂದಿಗೆ ಭಯದ ವಾತಾವರಣದಲ್ಲಿದ್ದಾರೆ. ಈ ಮೊದಲು ಪೊಲೀಸ್‌ ಇಲಾಖೆ ಗಸ್ತಿ ಮಾಡುತ್ತಿದ್ದರು. ಆದರೆ, ಇತ್ತೀಚಿಗೆ ಬರುತ್ತಿಲ್ಲದ್ದರಿಂದ ಕಳ್ಳರು ಅಂಗಡಿಗಳ ಬೀಗ ಒಡೆದು ಕಳ್ಳತನ ಮಾಡುತ್ತಿದ್ದಾರೆ. ಕೂಡಲೇ ಪೊಲೀಸ್ ಇಲಾಖೆ ರಾತ್ರಿ ವೇಳೆ ಹೆಚ್ಚಿನ ಗಸ್ತಿಗೆ ಪೊಲೀಸರನ್ನು ನಿಯೋಜಿಸಬೇಕು ಹಾಗೂ ಇಷ್ಟು ಪ್ರಕರಣದಲ್ಲಿ ಭಾಗಿಯಾಗಿರುವ ಕಳ್ಳರ ಪತ್ತೆಗೆ ಪ್ರತ್ಯೇಕ ಪೊಲೀಸ್ ತಂಡ ರಚಿಸಿ ಪತ್ತೆ ಹಚ್ಚಬೇಕು ಎಂದು ಎಸ್‌ಡಿಪಿಐ ಉಜಿರೆ ಬ್ಲಾಕ್ ಅಧ್ಯಕ್ಷರಾದ ಸಾಹುಲ್ ಉಜಿರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!