ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಮಲವಂತಿಗೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಮಲವಂತಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗೌಡರ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿ ಮಲವಂತಿಗೆ ಅಧ್ಯಕ್ಷ ಆನಂದ ಗೌಡ ಮೈರ್ನೋಡಿ, ಉಪಾಧ್ಯಕ್ಷ ಜಯವರ್ಮ ಗೌಡ ಕಲ್ಬೆಟ್ಟು, ಜಯಾನಂದ ಗೌಡ, ಯುವ ವೇದಿಕೆ ಅಧ್ಯಕ್ಷರಾದ ದಿನೇಶ್ ಡಿ ಗೌಡ, ಗ್ರಾಮದ ಮಾಗನೆ ಗೌಡರಾದ ಶೇಖರ ಗೌಡ ಹೊಳೆಕೆರೆ , ತಾಲೂಕು ಯುವ ವೇದಿಕೆ ನಿರ್ದೇಶಕರಾದ ತೀಕ್ಷಿತ್ ಕೆ.ಕಲ್ಬೆಟ್ಟು, ಚಂದ್ರಶೇಖರ್ ಗೌಡ ತಂಗಿತ್ತಿಪ್ಪಾಲು ಹಾಗೂ ಸದಸ್ಯರಾದ ಶೀನಪ್ಪ ಗೌಡ ನೇತ್ರಕೊಡಂಗೆ, ನಾರಾಯಣ ಗೌಡ ಕೊಂಡಾಲು ಮತ್ತು ಸ್ವಜಾತಿ ಬಾಂಧವರು ಉಪಸ್ಥಿತರಿದ್ದರು.

Leave a Comment

error: Content is protected !!